ಬೆಳ್ಳಿಗಟ್ಟ ಗ್ರಾಮಕ್ಕೆ ಇ.ಓ ಭೇಟಿ: ಉದ್ಯೋಗ ಖಾತರಿ ಕಾಮಗಾರಿ ಪರಿಶೀಲನೆ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬೆಳ್ಳಿಗಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ಪರಿಶೀಲನೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ ಮಾತನಾಡಿ ಗ್ರಾಮೀಣ ಪ್ರದೇಶಗಳ ಕೂಲಿ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಬಗ್ಗೆ ಪ್ರತಿ ಗ್ರಾಪಂ ಪಿಡಿಒ ಮತ್ತು ಕಾರ್ಯದರ್ಶಿಗಳು ಗ್ರಾಮೀಣ ಪ್ರದೇಶದ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ನರೇಗಾ ಅಡಿ ಕೂಲಿ ಪಡೆಯುವುದು ಕಾರ್ಮಿಕರ ಹಕ್ಕಾಗಿದೆ ಎಂದು ತಾಲೂಕು ಪಂಚಾಯಿತಿ ಇಓ ರವಿಕುಮಾರ್ ಹೇಳಿದರು. ಈ ಸಂದರ್ಭದಲ್ಲಿ ಕೂಲಿಕಾರರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ಕೆಲವೊಂದು ವಿಷಯಗಳ ಬಗ್ಗೆ ಚರ್ಚಿಸಿದರು, ಇನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಬಸವರಾಜಪ್ಪ ಕೂಲಿ ಕಾರ್ಮಿಕರ ಮಕ್ಕಳಿಗೆ ನೆರಳಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಸಂದರ್ಭದಲ್ಲಿ ಗ್ರಾ ಪಂ ಸರ್ವ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗ ಸೇರಿದಂತೆ ಕೂಲಿಕಾರ್ಮಿಕರು ಜರ್ಮಲಿ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಅಧ್ಯಕ್ಷರು ಉಪಾಧ್ಯಕ್ಷರು, ಸಿಬ್ಬಂದಿ ವರ್ಗದವರು ಸಹ ಇದ್ದರು……..
ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030