ಸಂತೋಷ್ ಲಾಡ್ ಪೌಂಡೇಶನ್ ವತಿಯಿಂದ ಐಟಿಐ ವಿದ್ಯಾರ್ಥಿಗಳಿಗೆ ಉಚಿತ ಅಪ್ರೆಂಟಿಸ್ ಶಿಬಿರ,, ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಭವನದಲ್ಲಿ ನಡೆದ ಐಟಿಐ ಆದ ವಿದ್ಯಾರ್ಥಿಗಳಿಗೆ ಉಚಿತ ಅಪ್ರೆಂಟಿಸ್ ಟ್ರೆನಿಂಗ್ ಮತ್ತು ಉದ್ಯೋಗ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಸಂತೋಷ್ ಲಾಡ್ ಪೌಂಡೇಶನ್ ವತಿಯಿಂದ ಕೂಡ್ಲಿಗಿ ನಗರದಲ್ಲಿ ಹಮ್ಮಿಕೊಂಡಿದ್ದರು ಇದರ ಉದ್ದೇಶ ತಾಲೂಕಿನ ಎಲ್ಲಾ ವಿದ್ಯಾರ್ಥಿಗಳು ಹಾಜರಿದ್ದು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಮುಂಡರಗಿ ನಾಗರಾಜ್ ಸರ್ ರವರು ಮಾತನಾಡಿ ಐಟಿಐ ಮತ್ತು ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಸಂತೋಷ್ ಲಾಡ್ ಪೌಂಡೇಶನ್ ವತಿಯಿಂದ ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಈ ಕೆಲಸ ಹಮ್ಮಿಕೊಂಡಿದ್ದು ಅದಕ್ಕಾಗಿ ಈಗಾಗಲೇ ಸಾಕಷ್ಟು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಕೆಲಸವನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು ಇದೇ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿದ್ದು ಹಳ್ಳಿ ಗೌಡ, ಹಾಗೂ ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಗುರುಸಿದ್ದನಗೌಡ್ರು ಕಾನಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಜಿ. ಕುಮಾರ್ ಗೌಡ್ರು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗುಜ್ಜಲ್ ರಘು ಮತ್ತು ಕೆಪಿಸಿಸಿ ಸದಸ್ಯರಾದ ಲೋಕೇಶ್ ವಿ ನಾಯಕ, ಪಟ್ಟಣ ಪಂಚಾಯಿತಿ ಸದಸ್ಯರಾದ ಕಾವಲ್ಲಿ ಶಿವಪ್ಪ ನಾಯಕ ತಾಲೂಕಿನ ಕಾಂಗ್ರೆಸ್ ಮತ್ತು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಕೊಟ್ರೇಶ್ ರಾಘವೇಂದ್ರ ಕುಮಾರ್ ಬಸವರಾಜ್ ಮುಖಂಡರು ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಅಜಯ್ ರಾಮ ಸಾಲಿ ಬಯಲು ತುಂಬರಗುದ್ದಿ ದುರುಗೇಶ್ ಮತ್ತು ಕಾನಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕೆ.ಗಂಗಣ್ಣ. ಯುವ ಕಾಂಗ್ರೆಸ್ ಮುಖಂಡರು ನವೀನ್ ಮತ್ತು ಮಹೇಶ್ ಹಾಜರಿದ್ದರು…
ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030