ರೈತರು ಬೆಳೆ ಸಮೀಕ್ಷೆ ಹಾಗೂ ಫಸಲ್ ಭೀಮಾ ಯೋಜನೆ ಪಡೆಯಲು ಮನವಿ
ಗುಡೇಕೋಟೆ ಜು. 26-ತಾಲ್ಲೂಕಿನಲ್ಲಿ ರೈತರು ಬೆಳೆಯುವ ಮುಖ್ಯ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯ 2022 ರ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮಾ ಸಪ್ತಾಹ ಕಾರ್ಯಕ್ರಮ ತಾಲೂಕಿನ ಗುಡೇಕೋಟೆ ಸಮೀಪದ ಚಂದ್ರಶೇಖರಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದು ಹವಾಮನ ಪರಿಸ್ಥಿತಿಗಳಿಂದ ಉಂಟಾಗುವ ನಷ್ಟಗಳಿಗಾಗಿ ರೈತರಿಗೆ ಪರಿಹಾರ ನೀಡಲಾಗುವುದು. ಇದರ ಸೌಲಭ್ಯವನ್ನು ಜು.31 ರೊಳಗೆ ರೈತ ಬಾಂಧವರು ಪಡೆಯಬೇಕು ಎಂದು ಗುಡೇಕೋಟೆ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ತಾಂತ್ರಿಕ ವ್ಯವಸ್ಥಾಪಕರಾದ ಗೌತಮ್ ಜಿ.ಎಂ.ತಿಳಿಸಿದರು.
ಇಲ್ಲಿನ ಚಂದ್ರಶೇಖರಪುರ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅವರಣದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮುಂಗಾರು-2022 ಯೋಜನೆಯ ಪ್ರಚಾರೋಂದಲನ ಹಾಗೂ ಬೆಳೆ ಸಮೀಕ್ಷೆ ಹಾಗೂ ಫಸಲ್ ಭೀಮಾ ಯೋಜನೆ ಕುರಿತು ರೈತರಿಗೆ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
2022ರ ಮುಂಗಾರು ಹಂಗಾಮಿನಲ್ಲಿ ಸ್ಥಳ ನಿರ್ದಿಷ್ಟ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು
ಬೆಳೆ ಮುಳುಗಡೆ ಸೇರಿದಂತೆ ಇನ್ನಿತರ ಪ್ರಕೃತಿಯಲ್ಲಿ ಉಂಟಾಗುವ ನಷ್ಟದ ನಿರ್ಧಾರವನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು. ಈ ಯೋಜನೆಯಡಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರದೊಳಗೆ (೧೫ ದಿನಗಳು) ಚಂಡಮಾರುತ, ಚಂಡಮಾರತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ರಾಜ್ಯದ ಎಲ್ಲಾ ಬೆಳೆಗಳನ್ನು ಒಳಪಡಿಸಲಾಗಿದೆ ಎಂದು ತಿಳಿಸಿದರು.
ತಾಲ್ಲೂಕಿನ ಎಲ್ಲಾ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೆಳೆ ವಿಮೆ ಬಗ್ಗೆ ಪ್ರಚಾರಾಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ರೈತರು ಬೆಳೆ ವಿಮೆ ಪಡೆಯಲು ಜುಲೈ 31 ಕಡೆ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಕೃಷಿ ಅಧಿಕಾರಿಗಳನ್ನು ಸಂಪರ್ಕಸಿ ಮಾಹಿತಿ ನೀಡಿ, ರೈತರ ಜಮೀನುಗಳಲ್ಲಿ ಬೆಳೆ ಸಮೀಕ್ಷೆ ನಡೆಸಲು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ತಾಲ್ಲೂಕು ಪಂಚಾಯತ್ ಸಿಬ್ಬಂದಿಗಳನ್ನು ಸಂರ್ಪರ್ಕ ಮಾಡಿ ಬೆಳೆಗಳ ಸಮೀಕ್ಷೆ ಮಾಡಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಗುಡೇಕೋಟೆ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ತಾಂತ್ರಿಕ ವ್ಯವಸ್ಥಾಪಕರಾದ ಗೌತಮ್ ಜಿ.ಎಂ.ರಾಮದುರ್ಗಾ ಗ್ರಾ ಪಂ ಅದ್ಯಕ್ಷರು ಸದಸ್ಯರು ಗ್ರಾಮದ ರೈತ ಮುಖಂಡರು ಯುವಕರು ಉಪಸ್ಥಿತರಿದ್ದರು…
ವರದಿ.ಡಿ.ಎಂ.ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030