ರಕ್ತದಾನ ಮಾಡಿ ಜೀವ ಉಳಿಸಿ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿ ಹೊಸಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗದ ಆವರಣದಲ್ಲಿ ಶುಕ್ರವಾರ ಪ್ರಾರ್ಥಮಿಕ ಆರೋಗ್ಯ ಕೇಂದ್ರ ಮತ್ತು ಚಿರಂಜೀವಿ ರಕ್ತ ಕೇಂದ್ರ ವಿಜಯನಗರ ಇವರ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನೀಲಮ್ಮ ಬೊಮ್ಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿ ರಕ್ತದಾನ ಮಾಡುವುದರಿಂದ ತುರ್ತುಪರಿಸ್ಥಿತಿಯಲ್ಲಿ ಮತ್ತೊಂದು ಜೀವ ಉಳಿಸಿದಂತಾಗುತ್ತದೆ.
ಆರೋಗ್ಯವಂತ ಪುರುಷರು ಮತ್ತು ಮಹಿಳೆಯರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದು ಆರೋಗ್ಯಕ್ಕೆ ಉತ್ತಮ ಎನ್ನುತ್ತಾರೆ ವೈದ್ಯರು ಹೇಳುತ್ತಿದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನಂತರ ಕಾನಹೊಸಹಳ್ಳಿ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿಶ್ವನಾಥ್ ಮಾತನಾಡಿ ಆರೋಗ್ಯವಂತ ಯುವಕರು ಮತ್ತು ಯುವತಿಯರು ರಕ್ತದಾನ ಮಾಡುವುದರಿಂದ ಮತ್ತೊಬ್ಬರ ಜೀವವನ್ನು ಉಳಿಸಲು ಸಹಕಾರಿಯಾಗುವುದು ಯುವಕರು ಮತ್ತು ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಕ್ತದಾನ ಶಿಬಿರದಲ್ಲಿ ಪತ್ರಕರ್ತರು ಸೇರಿದಂತೆ ಸಮಾಜ ಸೇವಕರು ಯುವಕರು ಮಹಿಳೆಯರು ಇತರ ಸಂಘಗಳ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಗಳು ಅಧಿಕಾರಿಗಳು ಇತರ ರಕ್ತದಾನ ಮಾಡಿದರು.
ಈ ಕಾರ್ಯಕ್ರಮದಲ್ಲಿ ಮುಖಂಡರಾದ ಜುಟ್ಟು ಲಿಂಗನ ಹಟ್ಟಿ ಬೊಮ್ಮಯ್ಯ ಎಲ್ ಎಚ್ ವಿ ಗಳಾದ ಎಂಬಿ ಭಾರತಿ.ಕೃಷ್ಣ.ರಾಘವ ರೆಡ್ಡಿ.ತಿಪ್ಪೇಸ್ವಾಮಿ. ಪ್ರಯೋಗಶಾಲೆಯ ತಜ್ಞರಾದ ಪ್ರಸಾದ್. ಸೋಮಶೇಖರ್. ಪ್ರವೀಣ್.ಕರಿಯಪ್ಪ.ಸಿದ್ದೇಶ್. ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ.ಅನ್ನಪೂರ್ಣಮ್ಮ ಕವಿತಾ ನಾಗವೇಣಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳಮ್ಮ ಮತ್ತು ಶಶಿರೇಖಾ ಹಾಗೂ ಆಶಾ ಕಾರ್ಯಕರ್ತರು ಸೇರಿದಂತೆ ಚಿರಂಜೀವಿ ರಕ್ತ ಭಂಡಾರ ಸಿಬ್ಬಂದಿ ವರ್ಗ ಇತರರು ಸಾರ್ವಜನಿಕರು ಉಪಸ್ಥಿತರಿದ್ದರು…
ವರದಿ. ವಿರೇಶ್ ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030