ಚಿಕ್ಕ ಜೋಗಿಹಳ್ಳಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚಿಕ್ಕ ಜೋಗಿಹಳ್ಳಿ ಗ್ರಾಮದಲ್ಲಿ ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮಾಲರ್ಪಣೆ, ಪೂಜೆ, ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಎಸ್ಬಿ ಪ್ರಕಾಶ್ ಮಾತನಾಡಿ. ಸಾಮಾನ್ಯ ವ್ಯಕ್ತಿಯೊಬ್ಬ ಮಹಾನ್ ಕಾವ್ಯ ರಚಿಸುವಷ್ಟರ ಮಟ್ಟಿಗೆ ತಪಸ್ಸು ಮಾಡಿ ಜ್ಞಾನ ಸಂಪಾದನೆ ಮಾಡಿದ ಮಹರ್ಷಿ ವಾಲ್ಮೀಕಿ, ಅಜ್ಞಾನದಿಂದ ಸುಜ್ಞಾನದೆಡೆಗೆ ಸಾಗುವ ದಾರಿಯನ್ನು ತೋರಿಸಿಕೊಟ್ಟ ಇಂತಹ ಮೇರು ವ್ಯಕ್ತಿ ಈ ಪುಣ್ಯ ಭೂಮಿಯಲ್ಲಿ ಜನಿಸಿದ್ದು ನಾವೆಲ್ಲಾ ಹೆಮ್ಮೆ ಪಡುವಂತಹದ್ದು ಎಂದರು ನಾಗಣ್ಣ ಬಾಬು ಪ್ರಕಾಶ್ ಬಿ ಓಬಣ್ಣ ಕುರಿಟ್ಟಿ ಮುತ್ತಾಲಿ ಜಿ ಪಾಲಯ್ಯ ಡಿಎಂ ಈಶ್ವರಪ್ಪ ಸೇರಿದಂತೆ ವಾಲ್ಮೀಕಿ ಸಮಾಜದ ಮುಖಂಡರು ಸಾರ್ವಜನಿಕರು ಇದ್ದರು…
ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030