ಕೂಡ್ಲಿಗಿ :ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ
ಕೂಡ್ಲಿಗಿ :ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಅ,28 ರಂದು ತಾಲೂಕು ಆಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು.
ಕನ್ನಡ ನಾಡು ನುಡಿಯ ಹಿರಿಮೆಯನ್ನು ಸಾರುವಂತ ಸುಪ್ರಸಿದ್ದ ಕನ್ನಡ ಗೀತೆಗಳನ್ನು ಶಾಲಾ ಮಕ್ಕಳು ಪ್ರಸ್ತುತ ಪಡಿಸಿದರು. ತಹಸೀಲ್ದಾರ್ ಟಿ, ಜಗದೀಶ್ ಮಾತನಾಡಿ ಕನ್ನಡ ರಾಜ್ಯೋತ್ಸವವನ್ನು ಈ ವರ್ಷ ವಿಶೇಷವಾಗಿ ಆಚರಿಸುವ ಪ್ರಯುಕ್ತ ಕನ್ನಡ ಅಭಿಮಾನ ಹೆಚ್ಚಿಸುವ ಮೂಲಕ ನಾಡಿನ ಕನ್ನಡ ಪರಂಪರೆಯ ಹೆಮ್ಮೆಯ ಕಾರ್ಯಕ್ರಮವಾಗಿದೆಯೆಂದರು. ಈ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಶಾಲಾ ಸಿಬ್ಬಂದಿ ವರ್ಗದವರು ವಿವಿಧ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು..
ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030