ಕೊಟ್ಟೂರಿನ ಶ್ರೀ ಗುರುಕೊಟ್ಟೂರೇಶ್ವರನ ರಥೋತ್ಸವದಲ್ಲಿ ದರ್ಶನ ಪಡೆದು ನಾಡಿನ ಒಳಿತಿಗಾಗಿ ಪೂಜೆ ಸಲ್ಲಿಸಿದ ಶಾಸಕ – ಡಾ. ಶ್ರೀನಿವಾಸ್. ಎನ್. ಟಿ.
ಕೂಡ್ಲಿಗಿ ಕ್ಷೇತ್ರದ ಮಾನ್ಯಶಾಸಕರು ದಿ. 04-03-24 ರಂದು ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವದಲ್ಲಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಮಧ್ಯ ಕರ್ನಾಟಕದಲ್ಲಿ ಪಂಚಗಣಾಧೀಶರಲ್ಲಿ ಒಬ್ಬರಾದ ಶ್ರೀ ಗುರು ಕೊಟ್ಟೂರೇಶ್ವರ ಅವರು ಕೃಷಿಗೆ ಒತ್ತು ಕೊಟ್ಟು ಸಮಾಜ ಸುಧಾರಣೆಗಾಗಿ ಶ್ರಮಿಸಿರುವುದನ್ನು ಶಾಸಕರು ಅಭಿಮಾನದಿಂದ ಸ್ಮರಿಸಿಕೊಂಡು ಹೆಮ್ಮೆ ಪಟ್ಟರು. ನಮ್ಮ ಕೂಡ್ಲಿಗಿ ಕ್ಷೇತ್ರದ ಒಳಿತಿಗಾಗಿ ಆರೋಗ್ಯ, ಸುಖ, ಸಂತೋಷ ಮತ್ತು ಸಮೃದ್ಧಿಯ ಜೀವನ ಸಿಗಲಿ ಎಂದೂ ಶ್ರೀ ಗುರು ಕೊಟ್ಟೂರೇಶ್ವರನಲ್ಲಿ ಭಕ್ತಿಯಿಂದ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು…
ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030