ಪ್ರಕೃತಿ ವಿಕೋಪದಿಂದ ಜೀವಹಾನಿ: ಜಿಲ್ಲಾಧಿಕಾರಿಗಳಿಂದ ಪರಿಹಾರ ವಿತರಣೆ
ಕೊಪ್ಪಳ :
ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಮೇ 05ರಂದು ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡು ಕನಕಗಿರಿ ತಾಲೂಕಿನ ಜೀರಾಳ ಗ್ರಾಮಕ್ಕೆ ಭೇಟಿ ನೀಡಿದರು.
ಬಿರುಗಾಳಿಗೆ ಮನೆಯ ಗೋಡೆ ಕುಸಿದು ಮೃತಪಟ್ಟ ದೇವಮ್ಮ ತಂದೆ ಕನಕಪ್ಪ ಮತ್ತು ಫಕೀರಮ್ಮ ಗಂಡ ತಿಮ್ಮಪ್ಪ ಅವರ ಕುಟುಂಬ ವರ್ಗದವರಿಗೆ ಭೇಟಿ ಮಾಡಿ ಸಾಂತ್ವನ ಹೇಳಿದರು.
ಮೃತ ಕುಟುಂಬ ವರ್ಗದವರಿಗೆ ತಲಾ 5 ಲಕ್ಷ ರೂಗಳಂತೆ ಒಟ್ಟು 10 ಲಕ್ಷ ಪರಿಹಾರ ಧನ ವಿತರಿಸಿದರು.
ಮುಂದಿನ ದಿನಗಳಲ್ಲಿ ನೈಸರ್ಗಿಕ ವಿಕೋಪದಿಂದ ಮಾನವ ಜೀವ ಹಾನಿ ಮತ್ತು ಜಾನುವಾರು ಪ್ರಾಣ ಹಾನಿಗಳಾದಲ್ಲಿ ಕೂಡಲೇ ಪರಿಹಾರ ವಿತರಿಸಲು ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಇದೆ ವೇಳೆ ಜಿಲ್ಲಾಧಿಕಾರಿಗಳು ಸೂಚಿಸಿದರು…
ವರದಿ. ಸಂಗೀತ ಕೊಪ್ಪಳ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030