ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ತಪಾಸಣೆ ಶಿಬಿರ
ಕೊಪ್ಪಳ,: ಜಿಲ್ಲಾ ಕಾರಾಗೃಹ ಕೊಪ್ಪಳದಲ್ಲಿ ವಿಶ್ವ ಮಾನವ ಹಕ್ಕುಗಳ ಆಯೋಗದ ವತಿಯಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾರಾಗೃಹ ಹಾಗೂ ಶ್ರೀ ಅಮರೇಶ್ವರ ಕ್ಲಿನಿಕ್ ಕೊಪ್ಪಳ, ಸಹಯೋಗದಲ್ಲಿ ಮಾರ್ಚ್ 10 ರಂದು ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹದಲ್ಲಿನ ಬಂಧಿಗಳಿಗೆ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕಾರಾಗೃಹ ಅಧೀಕ್ಷಕರಾದ ವಿಜಯಕುಮಾರ ಡಿ ಚವ್ಹಾಣ ಹಾಗೂ ಕಾರಾಗೃಹದ ಸಿಬ್ಬಂದಿಗಳು, ಡಿ.ಎಲ್.ಎಸ್.ಎ ವಕೀಲರಾದ ಬೆಳ್ಳಿಯಪ್ಪ, ಮಂಜುನಾಥ ಬಿ, ಮಹಾಲಕ್ಷ್ಮೀ ವೈದ್ಯರಾದ ಲಿಂಗರಾಜ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು…
ವರದಿ. ಮಂಜುನಾಥ್ ಉಪ್ಪಾರ ಕೊಪ್ಪಳ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030