ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅಭಿವೃದ್ಧಿಯ ಕುರಿತು ಸಮಿತಿಯ ಸಭೆ.
ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲ್ಲೂಕಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಅಭಿವೃದ್ಧಿ ಕಾಮಗಾರಿಯ ಕುರಿತು ಉಪನ್ಯಾಸಕರು ಹಾಗೂ ಅಭಿವೃದ್ಧಿ ಮಂಡಳಿಯ ಸದಸ್ಯರ ಜತೆ ಚರ್ಚೆ ಮಾಡಲಾಯಿತು .ಈ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಭಿವೃದ್ದಿ ಮಂಡಳಿಯ ಸದಸ್ಯರಾದ ಮಲ್ಲಿಕಾರ್ಜುನ ಪೂಜಾರಿ ಅವರು ಮಾತನಾಡಿ ಶೌಚಾಲಯದ ಕೊರತೆಯಿದ್ದು ಶೌಚಾಲಯಕ್ಕಾಗಿ ಮಾನ್ಯ ಶಾಸಕರು 5ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ ಇದರ ಕಾಮಗಾರಿ ಪ್ರಕ್ರಿಯೆಯನ್ನು ಮುಂದಿನ ವಾರದಿಂದ ಕೈಗೊಳ್ಳಲಾಗುವುದು ಎಂದರು .ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೌರವ ಉಪನ್ಯಾಸಕರು ಹಾಗೂ ಅತಿಥಿ ಉಪನ್ಯಾಸಕರ ಕುಂದುಕೊರತೆಗಳನ್ನು ಆಲಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಮಲ್ಲಿಕಾರ್ಜುನ ಪೂಜಾರ ರವರು ಆದಷ್ಟು ಬೇಗನೆ ವೇತನದ ತಾರತಮ್ಯ ನಿವಾರಣೆಯನ್ನು ಬಗೆಹರಿಸುವ ಕುರಿತು ಚರ್ಚಿಸಿದರು .ಇದಕ್ಕೆ ಪ್ರತಿಕ್ರಿಯಿಸಿದ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ರಾದ ಶ್ರೀಮತಿ ವಿಜಯಲಕ್ಷ್ಮಿ ಚೇಗರೆಡ್ಡಿ ರವರು ಗೌರವ ಉಪನ್ಯಾಸಕರಿಗೆ ಹಾಗೂ ಅತಿಥಿ ಉಪನ್ಯಾಸಕರಿಗೆ ಸಿಗುವ ಸವಲತ್ತುಗಳ ಬಗ್ಗೆ ಮುಂದಿನ ಮೇಲಿನ ಅಧಿಕಾರಿಗಳೊಡನೆ ಮಾತನಾಡಿ ಸೂಕ್ತ ಕ್ರಮವನ್ನು ಆದಷ್ಟು ಬೇಗನೆ ಕೈಗೊಳ್ಳಲಾಗುತ್ತದೆ ಎಂದು ಪ್ರತಿಕ್ರಿಯಿಸಿದರು .ಈ ಸಭೆಯಲ್ಲಿ ಕಾಲೇಜಿನ ಉಪನ್ಯಾಸಕರು ಅತಿಥಿ ಉಪನ್ಯಾಸಕರ ಗೌರವ ಉಪನ್ಯಾಸಕರೆಲ್ಲರೂ ಪಾಲ್ಗೊಂಡಿದ್ದರು..
ವರದಿ. ಮಂಜುನಾಥ್, ದೊಡ್ಡಮನಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030