ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಜಾತ್ರೆ ಸರಳ ಆಚರಣೆಗೆ ನಿರ್ಧಾರ: ಸೂರಳ್ಕರ್…!!!

Listen to this article

ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಜಾತ್ರೆ ಸರಳ ಆಚರಣೆಗೆ ನಿರ್ಧಾರ: ಸೂರಳ್ಕರ್

ದಕ್ಷಿಣ ಭಾರತದ ಸುಪ್ರಸಿದ್ದ ಬೃಹತ್ ಕುಂಭಮೇಳ ಎಂದೇ ಖ್ಯಾತಿ ಹೊಂದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ರಥೋತ್ಸವವು ಜನವರಿ 19 ರಂದು ಸರಳವಾಗಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸೂರಳ್ಕರ್ ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಡವರೊಂದಿಗೆ ಮಾತನಾಡಿದ ಅವರು ಎಲ್ಲರೂ ಕೋವಿಡ್ ಮಾರ್ಗ ಸೂಚಿಗಳನ್ನು ಕಡ್ಡಾಯ ವಾಗಿ ಪಾಲಿಸಬೇಕು ಈ ವರ್ಷ ಯಾವುದೇ ಅದ್ದೂರಿ ಜಾತ್ರೆಗಳಿಗೆ ಅವಕಾಶವಿಲ್ಲ ಈ ಕುರಿತು ಈಗಾಗಲೇ ಚರ್ಚಿಸಲಾಗಿದೆ ಸರಕಾರ ನಿಯಮಗಳನ್ನು ಎಲ್ಲರು ಪಾಲಿಸಬೇಕಿದೆ ಎಂದರು.
ಜಾತ್ರೆಯ ಬಗ್ಗೆ ಈಗಾಗಲೇ ಕೆಡಿಪಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಸರಕಾರದ ನಿಯಮಗಳ ಪ್ರಕಾರ ಎನು ಮಾಡಲು ಸಾಧ್ಯವಿದೆಯೋ ಆ ಪ್ರಕಾರ ಜಾತ್ರೆ ನಡೆಯಲಿದೆ. ಸ್ವಾಮೀಜಿಗಳು ಕೂಡ ನಾವು ಸರಕಾರದ ಆದೇಶ ಪಾಲಿಸುತ್ತೇವೆ ಎಂದಿದ್ದಾರೆ ಎಂದು ಹೇಳಿದರು. ಸಾರ್ವಜನಿಕರು ನಿಯಮ ಮೀರುವಂತಿಲ್ಲ ಮತ್ತು ಯಾವುದೇ ಗೊಂದಲ ಪಡುವ ಅವಶ್ಯಕತೆ ಇಲ್ಲ ಸರಕಾರದ ನಿಯಮಗಳನ್ನ ಎಲ್ಲರೂ ಚಾಚು ತಪ್ಪದೇ ಪಾಲಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು…

ವರದಿ. ಶರಣು ಗೌಡ ಪಟೇಲ್, ಕೊಪ್ಪಳ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend