ಲೋಕಸಭಾ ಚುನಾವಣೆ ಬೆನ್ನಲ್ಲೆ ಬಿಜೆಪಿ ಸೇರಲು ಮುಂದಾದ ಶಾಸಕ ಜನಾರ್ಧನ ರೆಡ್ಡಿ…!!

Listen to this article

ಬಳ್ಳಾರಿ: ಗಣಿ ಉದ್ಯಮಿ ಮತ್ತು ಒಕ್ಕಲಿಗ ಕರ್ನಾಟಕ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಶಾಸಕರಾದ ಜಿ. ಜನಾರ್ದನ ರೆಡ್ಡಿ ಇಂದು ಮತ್ತೆ ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಈ ಬೆಳವಣಿಗೆ ಬಂದಿರುವುದು ಸದ್ಯ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇಂದು (ಮಾ. 25) ಬೆಳಗ್ಗೆ 10 ಗಂಟೆಗೆ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಲು ನಿರ್ಧರಿಸಿದ್ದೇನೆ. ಬಿಜೆಪಿ ನಮ್ಮ ತಾಯಿಗೆ ಸಮಾನ, ಕೆಆರ್‌ಪಿಪಿ ಕಾರ್ಯಕರ್ತರೊಂದಿಗೆ ಸಭೆ ಕರೆದು ಅಭಿಪ್ರಾಯ ಪಡೆದು ಬಿಜೆಪಿ ಸೇರಲು ಸರ್ವಾನುಮತದಿಂದ ನಿರ್ಧರಿಸಿದ್ದೇನೆ. ಅವರು ಸದಾ ನನ್ನೊಂದಿಗೆ ಇರುತ್ತಾರೆ ಎಂದು ನನಗೆ ಭರವಸೆ ನೀಡಿದ್ದಾರೆ. ಕಷ್ಟದ ಸಮಯದಲ್ಲಿ ಪಕ್ಷದ ಕಾರ್ಯಕರ್ತರು ಬೆಂಬಲಕ್ಕೆ ನಿಂತಿದ್ದಾರೆ ಎಂದು ರೆಡ್ಡಿ ಹೇಳಿದ್ದಾರೆ.

ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಕೆಆರ್‌ಪಿಪಿಯಿಂದ ಸ್ಪರ್ಧಿಸಿ ಚುನಾವಣೆಗೆ ಸ್ಪರ್ಧಿಸಿದ್ದರು. ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. 28 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆಯ ಮತದಾನ ನಡೆಯಲಿದ್ದು, ಜೂನ್ 4ರಂದು ಮತಗಳ ಎಣಿಕೆ ನಡೆಯಲಿದೆ ನೋಡೋಣ ಸ್ನೇಹಿತರ ಸಮ್ಮಿಲನದಿಂದ ಮತ್ತೆ ರಾಜಕೀಯ ಬದಲಾವಣೆ ತರುವಲ್ಲಿ ಯಶಸ್ವಿಯಾಗುವುದೆಂದು ಕಾಯ್ದು ನೋಡೋಣ…

ವರದಿ. ಮುಕ್ಕಣ್ಣ ಹುಲಿಗುಡ್ಡ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend