“ಅನ್ನಂ ಪರಬ್ರಹ್ಮಂ”
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಚಳ್ಳಕೆರೆ ಶಾಸಕರ ಭವನದಲ್ಲಿ ಉಚಿತ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಚಾಲನೆ.
ರಾಜ್ಯಾದ್ಯಂತ ಮಾರಕ ಕೊರೋನಾ ವೈರಸ್ ಎರಡನೇ ಅಲೆಯ ಮರಣ ಮೃದಂಗ ಮುಂದುವರೆದಿದ್ದು, ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಲಾಕ್ ಡೌನ್ ಮಾದರಿಯ ಕರ್ಫ್ಯೂ ಜಾರಿಗೆ ತಂದಿದೆ.
ಈ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಉಪಹಾರ ಗೃಹಗಳು ಮುಚ್ಚಿದ್ದು, ಅಗತ್ಯ ಕೆಲಸ ಕಾರ್ಯಗಳಿಗಾಗಿ ಚಳ್ಳಕೆರೆಗೆ ಆಗಮಿಸುವ
ರೈತರು, ಬಡವರು, ಕೂಲಿ ಕಾರ್ಮಿಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಸಾವಿರಾರು ಜನರು ಊಟ ಸಿಗದೆ ಕಂಗಾಲಾಗಿದ್ದಾರೆ. ಕ್ಷೇತ್ರದ ಜನರ ಹಸಿವನ್ನು ತಣಿಸುವ ಸಲುವಾಗಿ ಚಳ್ಳಕೆರೆ ಶಾಸಕರ ಭವನದಲ್ಲಿ ಉಚಿತ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ.
ಈ ಅನ್ನ ಸಂತರ್ಪಣೆ ಕಾರ್ಯಕ್ರಮ ಕರ್ಫ್ಯೂ ಮುಗಿಯುವವರೆಗೂ ಮುಂದುವರೆಯಲಿದ್ದು,
ಅಗತ್ಯ ಕೆಲಸ ಕಾರ್ಯಗಳಿಗಾಗಿ ನಗರಕ್ಕೆ ಆಗಮಿಸುವ ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡುತ್ತೇನೆ.
ಟಿ. ರಘುಮೂರ್ತಿಶಾಸಕರು,ಚಳ್ಳಕೆರೆ ವಿಧಾನಸಭಾ ಕ್ಷೇತ್ರ.
ವರದಿ, ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030