ಬೇಸಿಗೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಹೆಸರಾಂತ ಶಾಸಕರು ಬಾಗಿ…!!!

Listen to this article

ವರದಿ. ಶಶಿಕುಮಾರ್ ಚಳ್ಳಕೆರೆ

ಚಿತ್ರುದುರ್ಗ ಜಿಲ್ಲೆಯ ನೀರಾವರಿ ಜಲಾಶಯಗಳಲ್ಲಿರುವ ನೀರನ್ನು ಬೇಸಿಗೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸುವ ಸಂಬಂಧವಾಗಿ ಮತ್ತು 0.25 ಟಿಎಂಸಿ ನೀರನ್ನು ಚಳ್ಳಕೆರೆ ವಿಧಾನಸಭಾ ವ್ಯಾಪ್ತಿಯ ವೇದಾವತಿ ನದಿ ಪಾತ್ರದ ಗ್ರಾಮಗಳಿಗೆ ಕುಡಿಯುವ ನೀರಿನ ಸಲುವಾಗಿ ನೀರನ್ನು ಹರಿಸುವ ಸಂಬಂಧ ಬೆಂಗಳೂರಿನ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ, ಶಾಂತಿನಗರದಲ್ಲಿ ಹಮ್ಮಿಕೊಂಡಿದ್ದ ಮಹತ್ವದ ಸಭೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ರವರು ಪಾಲ್ಗೊಂಡು, ಮಹತ್ವದ ಚರ್ಚೆ ನಡೆಸಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಬೃಹತ್ /ಮಧ್ಯಮ ನೀರಾವರಿ ಜಲಾಶಯಗಳಲ್ಲಿರುವ ನೀರನ್ನು ಬೇಸಿಗೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಬಳಸುವ ಬಗ್ಗೆ ಉಲ್ಲೇಖ(1) ಮತ್ತು (2)ರ ಸರ್ಕಾರದ ಆದೇಶಗಳಂತೆ ಜಲಸಂಪನ್ಮೂಲ ಇಲಾಖೆಯಡಿ ಬರುವ ಜಲಾಶಯಗಳಲ್ಲಿ ಸಂಗ್ರಹಿಸಿರುವ ನೀರನ್ನು ಬೇಸಿಗೆಯಲ್ಲಿ ಅಥವಾ ನೀರಿನ ಅಭಾವವಿರುವ ಪರಿಸ್ಥಿತಿಯಲ್ಲಿ ವ್ಯವಸ್ಥಿತವಾಗಿ ಕುಡಿಯುವ ನೀರಿನ ಉದ್ದೇಶಕ್ಕಾಗಿಯೇ ಮೀಸಲಿರಿಸಿ ಬಳಸಲು ಪ್ರಾದೇಶಿಕ ಆಯುಕ್ತರುಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯೊಂದಿಗೆ ಜಿಲ್ಲೆಯ ತಾಲ್ಲೂಕುಗಳು ಹಾಗೂ ಚಳ್ಳಕೆರೆ ಕ್ಷೇತ್ರಕ್ಕೆ ಜಲಾಶಯದ ನೀರನ್ನು, ಸಮರ್ಪಕ ಬಳಕೆ ಮಾಡಿಕೊಳ್ಳುವುದರ ಕುರಿತಂತೆ ಸುದೀರ್ಘ ಚರ್ಚೆ ನಡೆಸಿದರು..

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend