ಚಿತ್ರದುರ್ಗ: ಚಳ್ಳಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಶಾಸಕ ಟಿ ರಘುಮೂರ್ತಿ ಅವರು ಆಸ್ಪತ್ರೆಯ ಸ್ಥಿತಿ-ಗತಿಗಳನ್ನು ಪರಿಶೀಲನೆ ನಡೆಸಿದೆನು. ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಆಸ್ಪತ್ರೆಯಲ್ಲಿ ಸ್ವಚ್ಚತೆಯನ್ನು ಕಾಪಾಡುವುದರ ಜೊತೆಗೆ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಸಾಧ್ಯವಾದಷ್ಟು ಇಲ್ಲಿಯೇ ಸೂಕ್ತ ಚಿಕಿತ್ಸೆ ನೀಡಬೇಕು, ತುರ್ತು ಚಿಕಿತ್ಸೆ ಅಥವಾ ಇಲ್ಲಿನ ಸೌಲಭ್ಯ ಕೊರತೆಯಾದಾಗ ಮಾತ್ರ ರೋಗಿಗಳನ್ನು ಬೇರೆ ಕಡೆಗೆ ಶಿಫಾರಸ್ಸು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆ. ತಾಲೂಕು ಸಾರ್ವಜನಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ವಿಶೇಷ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಸೋಂಕಿತರ ಬಗ್ಗೆ ವಿಶೇಷ ಕಾಳಜಿ ವಹಿಸಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ವರದಿ. ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030