ಚಳ್ಳಕೆರೆ :-ಪೂಜಾರಿಕೆ ಹಾಗೂ ಹಣಕಾಸಿನ ವಿಚಾರದಲ್ಲಿ ಕೊಲೆಯಲ್ಲಿ ಅಂತ್ಯ…!!!

Listen to this article

ಚಳ್ಳಕೆರೆ : ದುರ್ಗಾಂಬಿಕ ದೇವಸ್ಥಾನದ ಪೂಜಾರಿಕೆ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆ ನಡೆದು ಓರ್ವ ವ್ಯಕ್ತಿ ಕೊಲೆಯಲ್ಲಿ ಅಂತ್ಯ ವಾಗಿ ಮೃತಪಟ್ಟಿರುವ ಘಟನೆ, ತಾಲೂಕಿನ ರಂಗವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯರಾಮಪ್ಪ ( 55) ವರ್ಷ ಮೃತಪಟ್ಟ ವ್ಯಕ್ತಿ.ನಿನ್ನೆ ರಾತ್ರಿ ದೇವಸ್ಥಾನ ವಿಚಾರಕ್ಕೆಎರಡು ಗುಂಪುಗಳ ನಡುವೆ,ವಾಗ್ವಾದ ನಡೆದು ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿ, ಚೆನ್ನಪ್ಪ, ಓಬಳೇಶ್,ಅರ್ಜುನ, ಆಕಾಶ್,ಮುಕುಂದ, ಎಂಬುವರು ಜಯರಾಮಪ್ಪ ಗೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಸ್ಥಳದಲ್ಲೇ ಕುಸಿದು ಬಿದ್ದ ಜಯರಾಮಪ್ಪ ನನ್ನು ಚಳ್ಳಕೆರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಸಾವಿಗೀಡಾಗಿದ್ದಾನೆ. ಈ ಬಗ್ಗೆ ಮೃತ ವ್ಯಕ್ತಿ ಪುತ್ರ ಹಾಗೂ ಪತ್ನಿ ಪೊಲೀಸ್ ಠಾಣೆಗೆ ನೀಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ಹಾಗೂ ಚಳ್ಳಕೆರೆ ಸಿಪಿಐ ರಾಮನಾಥ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಉಳಿದ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೊಲೆಯಾದ ವ್ಯಕ್ತಿಯ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ…..

 

ವರದಿ.ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend