ಚಿಕ್ಕಮಗಳೂರು : ಕಾಂಗ್ರೆಸ್ನವರು ಈಗ ಮಹಾದಾಯಿ ವಿಚಾರದಲ್ಲಿ ಪಾದಯಾತ್ರೆ ಮಾಡ್ತಾರಂತೆ
ಕಾಂಗ್ರೆಸ್ಸನ್ನ ಒಂದು ರಾಜಕೀಯ ಪಕ್ಷ ಅಂತಾ ಕರೆಯಬೇಕಾ.?
ಕಾಂಗ್ರೆಸ್ ಹುಳ ತಿಂದು ಹೋಗಿರುವ ಮರ, ಗೆದ್ದಲು ತಿಂದಿದೆ.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಪಕ್ಷವನ್ನು ಸಾಯಿಸುತ್ತಾರೆ
ಸ್ವಾತಂತ್ರ್ಯ ತಂದು ಕೊಟ್ಟ ಕಾಂಗ್ರೆಸ್ ಮಹಾಪುರುಷರೆಲ್ಲಾ ಹೋಗಿದ್ದಾರೆ
ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸ್ವಾರ್ಥಿಗಳು
ಇವರ ಸ್ವಾರ್ಥಕ್ಕೆ ಏನು ಬೇಕಾದರೂ ಹೇಳಿಕೆ ಕೊಡುತ್ತಾರೆ, ಪಾದಯಾತ್ರೆ ಮಾಡುತ್ತಾರೆ
ಇವತ್ತು ನೀನು ವಿರೋಧಪಕ್ಷದ ನಾಯಕ ಅಲ್ಲವೆಂದು ಸಿದ್ದರಾಮಯ್ಯಗೆ ಹೇಳಿದ್ರೆ
ಸಿದ್ದರಾಮಯ್ಯ ಕಾಂಗ್ರೆಸ್ ನಲ್ಲಿ ಖಂಡಿತವಾಗಿಯೂ ಇರಲ್ಲ
ಜೆಡಿಎಸ್ ನಲ್ಲಿ ಅವಕಾಶ ಸಿಕ್ಕಿಲ್ಲವೆಂದು ಪಕ್ಷ ಬಿಟ್ಟರು
ವಿರೋಧ ಪಕ್ಷದ ನಾಯಕನ ಸ್ಥಾನ ಸಿಗುತ್ತೆ ಅಂತಾ ಕಾಂಗ್ರೆಸ್ಗೆ ಬಂದ್ರು
ಅಂದಿನಿಂದಲೂ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸ್ಥಾನವನ್ನು ಅಲಂಕರಿಸುತ್ತಾ ಬಂದಿದ್ದಾರೆ
ಹಾಗಾದ್ರೆ ಕಾಂಗ್ರೆಸ್ನಲ್ಲಿ ಬೇರೆ ಯಾರು ನಾಯಕರು ಇಲ್ವಾ.?
ಸೋನಿಯಾ ಗಾಂಧಿ ಕರೆದ್ರೂ ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಹೋಗಲಿಲ್ಲ
ರಾಜ್ಯದಲ್ಲಿ ಪುಕ್ಸಟೆ ಸ್ಥಾನ ಸಿಗುತ್ತೆ ಅಂತ ಇಲ್ಲೇ ಇದ್ದಾರೆ
ಇಂಥವರು ನಮ್ಮ ಬಗ್ಗೆ ಮಾತನಾಡುತ್ತಾರೆ, ಅವರ ಚಟ ತೀರಿಸೋಕೆ ಮಾತನಾಡಲಿ ಬಿಡಿ
ಚಿಕ್ಕಮಗಳೂರಿನಲ್ಲಿ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯೆ…
ವರದಿ. ಸುರೇಶ್.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030