ವರದಿ. ಮಂಜುನಾಥ್, ಎಚ್
ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ಚಿಕ್ಕೋಬನಹಳ್ಳಿ ಗ್ರಾಮದ ಜಮೀನಿನ ಬದಿಯಲ್ಲಿದ್ದ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿಯಾದ ಘಟನೆ ನಡೆದಿದೆ. ಚಿಕ್ಕೋಬನಹಳ್ಳಿ ಗ್ರಾಮದ
ಎಂ.ವಿ. ಮಂಜಣ್ಣ ಎಂಬುವವರಿಗೆ ಸೇರಿದ ಜಮೀನಿನ ಸಮೀಪ ಇದ್ದ ವಿದ್ಯುತ್ ಪರಿವರ್ತಕದ ತಂತಿ ತುಂಡಾಗಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಜಮೀನಿನಲ್ಲಿದ್ದ ಮೆಕ್ಕೆ ಜೋಳ, ಶೇಂಗಾ ಬಣವೆ ಹಾಗೂ ಇನ್ನಿತರ ಬೆಳೆಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಠಾಣೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030