ಬೈಕ್ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಚಿತ್ರದುರ್ಗ ಉಪವಿಭಾಗಧಿಕಾರಿ ಸಾವು!!!

Listen to this article

ಚಿತ್ರದುರ್ಗ: ನಿನ್ನೆ ಬೆಳಗ್ಗೆ ರಸ್ತೆಯಲ್ಲಿ ವಾಕಿಂಗ್ ಮಾಡುವಾಗ ಅಪರಿಚಿತ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಚಿತ್ರದುರ್ಗ ಉಪವಿಭಾಗಧಿಕಾರಿ ಪ್ರಸನ್ನ (52 ವ) ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದರು. ಚಿತ್ರದುರ್ಗದ ಗೋನೂರು ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ವೇಳೆ ಗಂಭೀರವಾಗು ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ಆಸ್ಟರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸನ್ನ ಅವರು ಚಿತ್ರದುರ್ಗ ತಾಲೂಕಿನ ಕಡಬನಕಟ್ಟೆ ಗ್ರಾಮದವರಾಗಿದ್ದರು. ಇವರು ತಂದೆ, ತಾಯಿ ಹಾಗೂ ಇಬ್ಬರು ಸಹೋದರರು, ಇಬ್ಬರು ಹೆಣ್ಣುಮಕ್ಕಳು, ಪತ್ನಿಯನ್ನು ಅಗಲಿದ್ದಾರೆ.

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend