ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ರವರು ಚಿತ್ರದುರ್ಗ
(DHO) ಜಿಲ್ಲಾ ವೈದ್ಯಾಧಿಕಾರಿ ಡಾ ಪಾಲಕ್ಷಪ್ಪ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ ಬಸವರಾಜ್ ರವರನ್ನು ಭೇಟಿ ಮಾಡಿ, ಜಿಲ್ಲೆಯ ಕೋವಿಡ್ ಸ್ಥಿತಿಗತಿಗಳು ಕುರಿತಂತೆ ಮಾಹಿತಿ ಪಡೆದರು.
ಇದೇ ವೇಳೆ ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಆಸ್ಪತ್ರೆಗಳು, ಕೋವಿಡ್ ಸೋಂಕಿತರಿಗೆ ಮೀಸಲಿಟ್ಟರು ಬೆಡ್ ಗಳು, ಆಕ್ಸಿಜನ್ ಪೂರೈಕೆ,
ಕೋವಿಡ್ ಲಸಿಕೆಗಳ ಪೂರೈಕೆ, ರೆಮಿಡೀಸಿವರ್ ಲಭ್ಯತೆ ಸೇರಿದಂತೆ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಕುರಿತಂತೆ ಚರ್ಚೆ ನಡೆಸಿ ಕೋವಿಡ್ ನಿಯಂತ್ರಿಸಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳು ಕೈಗೊಳ್ಳುವಂತೆ ಮಾನ್ಯ ವೈದ್ಯಾಧಿಕಾರಿಗಳು ತಂಡಕ್ಕೆ ಸೂಚಿಸಿದರು..
ವರದಿ. ಶಶಿಕುಮಾರ್ ಚಳ್ಳಕೆರೆ
ಈ ವೇಳೆ ಜಿಲ್ಲಾ ಜಿಲ್ಲಾ ವೈದ್ಯಾಧಿಕಾರಿಗಳ ತಂಡ ಕೋವಿಡ್ ವಾರಿಯರ್ ಗಳ ತಂಡ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030