ಒಂದೇ ಕಲ್ಲಿನಿಂದ ಮೂರು ಹಕ್ಕಿ ಹೊಡೆಯಲು ಡಿಕೆಶಿ ತಂತ್ರ: ಶ್ರೀರಾಮುಲು…!!!

Listen to this article

ಒಂದೇ ಕಲ್ಲಿನಿಂದ ಮೂರು ಹಕ್ಕಿ ಹೊಡೆಯಲು ಡಿಕೆಶಿ ತಂತ್ರ: ಶ್ರೀರಾಮುಲು

ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಕೆದಾಟು ಪಾದಯಾತ್ರೆ ಮೂಲಕ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿ ಹೊಡೆಯುವ ತಂತ್ರ ಮಾಡುತ್ತಿದ್ದಾರೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಾದಯಾತ್ರೆ ಮೂಲಕ ಸಿದ್ದರಾಮಯ್ಯ, ಬಿಜೆಪಿ ಹಾಗೂ ಕುಮಾರಸ್ವಾಮಿ ಅವರನ್ನು ಹಣಿಯುವ ತಂತ್ರ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ನೀರಿಗಿಂತ, ಕುರ್ಚಿಗಾಗಿ ನಡೆಸುತ್ತಿದ್ದಾರೆ. ಇದೊಂದು ರೀತಿಯಲ್ಲಿ ಅಸ್ತಿತ್ವ ಉಳಿಸಿಕೊಳ್ಳುವ ಪಾದಯಾತ್ರೆ ಎಂದು ಕುಟಕಿದರು.
ಕೋವಿಡ್ ಸಂದರ್ಭದಲ್ಲಿ ಸ್ವಾರ್ಥ ರಾಜಕೀಯ ಮಾಡುತ್ತಿದ್ದಾರೆ.ಅಮಾಯಕರ ಆರೋಗ್ಯದ ಜೊತೆ ಕಾಂಗ್ರೆಸ್ ಆಟವಾಡುತ್ತಿದೆ. ದಿನನಿತ್ಯ ಕೋವಿಡ್, ಒಮಿಕ್ರಾನ್ ಬಗ್ಗೆ ಮಾತಾಡುತ್ತಲೇ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಏನೂ ಮಾಡದೇ, ಈಗ ಅಸ್ತಿತ್ವಕ್ಕೆ ಪಾದಯಾತ್ರೆ ನಡೆಸುತ್ತಿದೆ. ಕೊರೊನಾ ಕಾರಣಕ್ಕೆ ಪಾದಯಾತ್ರೆ ಬೇಡ ಎಂದು ವಿಪಕ್ಷ ನಾಯಕರಿಗೆ ಸ್ಪಷ್ಟವಾಗಿ ತಿಳಿಸಿದ್ದೇವೆ. ಆದರೂ ನಮ್ಮ ಮನವಿ ತಿರಸ್ಕಾರ ಮಾಡಿದ್ದಾರೆ. ಎಲ್ಲೆಲ್ಲೋ ಅಡ್ಡಾಡಿ ಬಂದವರು ಪಾದಯಾತ್ರೆ ಯಲ್ಲಿ ಭಾಗವಹಿಸುತ್ತಿದ್ದಾರೆ. ಇದರಿಂದಾಗಿ ಅಮಾಯಕರಿಗೆ ತೊಂದರೆಯಾಗುತ್ತಿದೆ.
ಪಾದಯಾತ್ರೆಯನ್ನು ನಿಲ್ಲಿಸುವಂತೆ ಮತ್ತೊಮ್ಮೆ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡುತ್ತೇವೆ. ನಮ್ಮ ಮನವಿಯನ್ನು ಕೇಳದಿದ್ದರೆ ಹೈಕೋರ್ಟ್ ಗೆ ಅವರ ಭಂಡತನ ತಿಳಿಸುತ್ತೇವೆ.
ಕುರ್ಚಿಗಾಗಿ ಸ್ವಾರ್ಥದಿಂದ ಪಾದಯಾತ್ರೆ ಮಾಡುವವರನ್ನು ಏನು ಮಾಡೋದು.
ತಮಿಳುನಾಡಿನಲ್ಲಿ ನಿಮ್ಮದೇ ಸರ್ಕಾರ ಇದೆ, ಅಲ್ಲಿ ಹೋಗಿ ಪಾದಯಾತ್ರೆ ಮಾಡಿ, ನಿಮ್ಮ ಮುಖ್ಯಮಂತ್ರಿಗೆ ಕೇಸ್ ವಾಪಾಸು ತೆಗೆದುಕೊಳ್ಳಲು ಹೇಳಿ ಎಂದು ಶ್ರೀರಾಮುಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು…

ವರದಿ.ಸುರೇಶ್ ಹೊಳಲ್ಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend