ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷದ ಸರ್ಕಾರ ಸಿದ್ಧವಿದೆ :ಶಾಸಕ ಟಿ ರಘುಮೂರ್ತಿ
ಚಳ್ಳಕೆರೆ: ಮಾಧ್ಯಮಗಳು ಜಾತ್ಯತೀತ ಹಾಗೂ ಪಕ್ಷಾತೀತವಾಗಿ ವರದಿಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿದಾಗ ಮಾತ್ರ ಪತ್ರಿಕೋದ್ಯಮಕ್ಕೆ ನಿಜವಾದ ಅರ್ಥ ಬರುತ್ತದೆ ಯಾವುದೇ ಸುದ್ದಿಗಳನ್ನು ವರದಿ ಮಾಡುವಾಗ ಕೂಲಂಕುಶವಾಗಿ ಪರಿಶೀಲನೆ ಮಾಡಿ ಪ್ರಕಟಿಸುವುದು ಮಾಧ್ಯಮದ ಜವಾಬ್ದಾರಿ ಎಂದು ಶಾಸಕ ರಘುಮೂರ್ತಿ ತಿಳಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆ ವತಿಯಿಂದ ಏರ್ಪಡಿಸಿದ್ದ ಪತ್ರಿಕೆ ದಿನಾಚರಣೆಯನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಮಾಧ್ಯಮಗಳು ನಿಷ್ಟೂರವಾದಿಯಾಗಿ ಕರ್ತವ್ಯವನ್ನು ನಿರ್ವಹಿಸಬೇಕು ಜನಸಾಮಾನ್ಯರು ರಾಜಕಾರಣಕ್ಕಿಂತ ಹೆಚ್ಚಾಗಿ ಮಾಧ್ಯಮಗಳನ್ನು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅವಲಂಬಿಸುತ್ತಾರೆ ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮ ಅಗಾಧವಾಗಿ ಬೆಳವಣಿಗೆ ಹೊಂದಿದ್ದು ಯುವಕರು ಪತ್ರಿಕೋದ್ಯಮದ ಕಡೆ ಆಕರ್ಷಿತರಾಗುತ್ತಿದ್ದಾರೆ ಪತ್ರಿಕೋದ್ಯಮದಲ್ಲಿ ಹಲವಾರು ಸಂಕಷ್ಟಗಳನ್ನು ಪತ್ರಕರ್ತರು ಎದುರಿಸುತ್ತಿದ್ದಾರೆ ಆದರೂ ತಮ್ಮ ಧೈರ್ಯದಿಂದ ಉದ್ಯಮವನ್ನು ನಡೆಸುತ್ತಿದ್ದಾರೆ ಕಾಂಗ್ರೆಸ್ ಸರ್ಕಾರ ಪತ್ರಕರ್ತರ ಬೇಡಿಕೆಗಳನ್ನು ನಿಯಮಾನುಸಾರ ಈಡೇರಿಸಲು ಬದ್ಧವಾಗಿದ್ದು ನಾನು ಸಹ ಸರ್ಕಾರಕ್ಕೆ ಪತ್ರಕರ್ತರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಕೊಡುತ್ತೇನೆ ತಿಳಿಸಿದರು.
ಪ್ರಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ರಾಜ್ಯ ಪತ್ರಕರ್ತರ ಧ್ವನಿ ಸಂಘಟನೆ ಅಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಕಳೆದ ಬಾರಿ ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆ ಮಾಡಿ ನಮ್ಮ ಮನವಿಗಳನ್ನು ಸಲ್ಲಿಸಿದರು ಸಹ ಬಿಜೆಪಿ ಸರ್ಕಾರ ಕಡೆಗಣಿಸಿದೆ ಈಗ ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸುತ್ತಾರೆ ಎಂಬ ಭರವಸೆ ಇದೆ ಯಾವುದೇ ಸರ್ಕಾರಗಳು ಬಂದರೂ ಪತ್ರಕರ್ತರನ್ನು ಕಡೆಗಣಿಸಲಾಗುತ್ತಿದೆ ಪತ್ರಕರ್ತರು ಇಂದಿನ ದಿನಗಳಲ್ಲಿ ತಮ್ಮ ಕುಟುಂಬವನ್ನು ಸಲಹಲು ಸಹ ಸಾಧ್ಯವಾಗದಷ್ಟು ಮಟ್ಟಿಗೆ ಕಷ್ಟದ ಜೀವನ ನಡೆಸುತ್ತಿದ್ದಾರೆ ರಾಜ್ಯದಲ್ಲಿ 16,000 ಪತ್ರಕರ್ತರಿದ್ದು ಹೀನಾಯ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಬಸ್ ಪಾಸ್ ವಿತರಣೆ ಮಾಸಾಶನ ಸೇರಿದಂತೆ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದರು ಇದುವರೆಗೂ ಈಡೇರಿಲ್ಲ ಈ ಧೋರಣೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಹೋರಾಟದ ಹಾದಿ ಹಿಡಿದು ತಮ್ಮ ಹಕ್ಕನ್ನು ಪಡೆಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ತಾಲೂಕು ವಕೀಲರ ಸಂಘದ ಅಧ್ಯಕ್ಷ ಆನಂದಪ್ಪ ಉಪನ್ಯಾಸ ನೀಡಿ ಮಾತನಾಡಿ ಪತ್ರಿಕೋದ್ಯಮ ಸ್ವತಂತ್ರ ಪೂರ್ವದಲ್ಲಿ ತನ್ನ ಕರ್ತವ್ಯವನ್ನು ನಿರ್ವಹಿಸುತ್ತಾ ಬಂದಿದೆ ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೋದ್ಯಮದ ಪಾಲು ಇದೆ ಬ್ರಿಟಿಷರ ಧೋರಣೆಗಳನ್ನು ಖಂಡಿಸಿ ಭಾರತಕ್ಕೆ ಸ್ವಾತಂತ್ರ್ಯ ಬರಲು ಪತ್ರಿಕೋದ್ಯಮ ಶ್ರಮಿಸಿದೆ ಪ್ರಜಾಪ್ರಭುತ್ವದ ವ್ಯವಸ್ತೆಯಲ್ಲಿ ಪತ್ರಿಕೋದ್ಯಮ ನಾಲ್ಕನೇ ಅಂಗವಾಗಿದ್ದು ಸಂವಿಧಾನದ ಆಶಯಗಳಂತೆ ನಡೆದುಕೊಳ್ಳುವ ಜವಾಬ್ದಾರಿಯನ್ನು ಹೊಂದಿದೆ ಕತ್ತಿಗಿಂತ ಲೇಖನಿ ಹರಿತವಾದದ್ದು ಎಂಬ ಮಾತು ಜನಜನಿತವಾಗಿದ್ದು ಕಾನೂನಿನ ಅಡಿಯಲ್ಲಿ ಪತ್ರಕರ್ತರು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕಾಗಿದೆ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಡಾಕ್ಟರ್ ಎಸ್ ಡಿ ಲೋಕೇಶ್ ,ಮಾರುತಿ, ರೈತ ಮುಖಂಡ ಸೋಮಗದ್ದು ರಂಗಸ್ವಾಮಿ ಪತ್ರಕರ್ತರಾದ ಕೊರಲಕುಂಟೆ ತಿಪ್ಪೇಸ್ವಾಮಿ, ರಾಮಾಂಜನೇಯ ವಕೀಲ ಶರಣಪ್ಪ ಜಯಣ್ಣ, ಚಂದ್ರಪ್ಪರವರನ್ನು ಸನ್ಮಾನಿಸಲಾಯಿತು ಈ ವೇಳೆ ಜೂನಿಯರ್ ವಿಷ್ಣುವರ್ಧನ್ ಹಾಗೂ ಜೂನಿಯರ್ ಅಂಬರೀಶ್ ತಮ್ಮ ನಟನೆಯಿಂದ ರಂಜಿಸಿದರು. ಸಂಘದ ವತಿಯಿಂದ ಗ್ರಾಮೀಣ ಪ್ರದೇಶದ ವಯೋವೃದ್ದರಿಗೆ ಬೆಡ್ ಶೀಟ್ ಗಳನ್ನು ವಿತರಿಸಲಾಯಿತು
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ತಾಲೂಕು ಅಧ್ಯಕ್ಷ ಆರ್ ದ್ಯಾಮರಾಜ್ ಗೌರವಾಧ್ಯಕ್ಷ ಡಿ ವೀರಣ್ಣ ಕಾರ್ಯಾಧ್ಯಕ್ಷ ಜಾಲಿ ಮಂಜು ಕುದಾಪುರ ತಿಪ್ಪೇಸ್ವಾಮಿ ,ದಿನೇಶ್ , ಗೋಪಾಲಯ್ಯ ವೇಣುಗೋಪಾಲ್ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂಜೆ ರಾಘವೇಂದ್ರ ಸದಸ್ಯರಾದ ರುದ್ರ ನಾಯಕ ಸಾವಿತ್ರಮ್ಮ ನನ್ನಿವಾಳ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಪಾರಿಜಾತ ಶಿವಣ್ಣ ಕನ್ನಡ ಪ್ರಭ ವರದಿಗಾರ ಪರಶುರಾಂಪುರ ನಾಗರಾಜ್ ನಾಯಕನಹಟ್ಟಿ ಹರೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು…
ವರದಿ. ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030