ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ವತಿಯಿಂದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕೆಪಿಸಿಸಿ ಎಸ್ಟಿ ಘಟಕದ ಅಧ್ಯಕ್ಷರಾದ ಕೆ.ಪಿ ಪಾಲಯ್ಯ ಅವರ ನೇತೃತ್ವದಲ್ಲಿ ಸಿಹಿ ಹಂಚಿ ಪ್ರತಿಭಟಸಿಲಾಯಿತು.
ತಾಲ್ಲೂಕಿನ ಪಲ್ಲಾಗಟ್ಟೆಯ ಪೆಟ್ರೋಲ್ ಬಂಕ್ ಹತ್ತಿರ ಜಮಾಹಿಸಿದ ಕಾಂಗ್ರೇಸ್ ಕಾರ್ಯಕರ್ತರು, ಮುಖಂಡರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಧಿಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದರು ನಂತರ ಮಾತನಾಡಿದ ಕೆಪಿಸಿಸಿ ಎಸ್ಟಿ ಘಟಕದ ಅಧ್ಯಕ್ಷರಾದ ಕೆ.ಪಿ ಪಾಲಯ್ಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರ, ಜನಸಾಮಾನ್ಯರ ಪರವಾದ ಸರ್ಕಾರವಲ್ಲ, ಬದಲಿಗೆ ಬಡವರ, ಜನಸಾಮಾನ್ಯರ ರಕ್ತ ಹಿರುವ ಸರ್ಕಾರ, ಜನರು ಕೊರೋನಾ ಲಾಕ್ಢೌನ್ ನಿಂದಾಗಿ ಆರ್ಥಿಕ ಸಮಸ್ಯೆಯಲ್ಲಿ ಬಳಲುತ್ತಿದ್ದಾರೆ ಇಂತಹ ಪರಿಸ್ಥಿತಿಯಲ್ಲಿ ಗಾಲಯದ ಮೇಲೆ ಬರೆ ಎಳೆದಂತೆ ಪೆಟ್ರೋಲ್ ಡೀಸಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮಾಡುತ್ತಲೇ ಬರುತ್ತಿದೆ ಎಂದು ಬೇಸರವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಷಂಷೀರ್ ಅಹಮದ್, ಉಪಾದ್ಯಕ್ಷ ಗೋಡೆ ಪ್ರಕಾಶ್, ಜಗಳೂರು ಉಸ್ತಾವರಿ ಕಲ್ಲೇಶ್ ರಾಜ್ ಪಾಟೀಲ್, ಯುವ ಕಾಂಗ್ರೇಸ್ ಅಧ್ಯಕ್ಷ ವಿಜಯ್ ಕೆಂಚೋಳ್, ಸೇರಿದಂತೆ ಕಾಂಗ್ರೇಸ್ ಮುಖಂಡರು ಹಾಗೂ ಕಾರ್ಯಕರ್ತರಿದ್ದರು.
ವರದಿ, ಸಂದೀಪ್, ಎಚ್, ಜಗಳೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030