ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷದ ಇಪ್ಪತ್ತೆರಡು ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ.
ಕೊಪ್ಪಳ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಭದ್ರಾ ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ತುಂಗಭದ್ರಾ ಜಲಾಶಯದ ಒಟ್ಟು ಸಂಗ್ರಹಣಾ ಸಾಮರ್ಥ್ಯ 101 TMC ಇದ್ದು ಈಗಾಗಲೇ 97 TMC ನೀರು ಸಂಗ್ರಹವಾಗಿದೆ ಆದ್ದರಿಂದ ಜಲಾಶಯದಿಂದ 1,22,000 ಕ್ಯೂಸೆಕ್ಸ್ ನೀರನ್ನು ಹರಿಬಿಡಲಾಗಿದೆ. ಒಳ ಹರಿವು ಇನ್ನೂ 1,90,000 ಕ್ಯೂಸೆಕ್ಸ್ ಇದ್ದು ಒಳ ಹರಿವಿನ ಪ್ರಮಾಣ ಹೆಚ್ಚುತ್ತಲೇ ಇದೆ ಹಾಗಾಗಿ ನದಿ ಅಕ್ಕ ಪಕ್ಕಲಿನ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ, ವಿಜಯನಗರ ಶ್ರೀ ಕೃಷ್ಣದೇವರಾಯ ಸಮಾಧಿ ಸ್ಥಳ ಸಂಪೂರ್ಣ ಮುಳುಗಡೆಯಾಗಿದೆ, ನವಬೃಂದಾವನ ಜನರ ಸಂಪರ್ಕ ಕಳೆದುಕೊಂಡಿದೆ, ಗಂಗಾವತಿ ಮತ್ತು ಕಂಪ್ಲಿ ಸಂಪರ್ಕ ಸೇತುವೆ ಮುಳುಗುವ ಹಂತದಲ್ಲಿದ್ದು ಸೇತುವೆ ಮೇಲೆ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ…
ವರದಿ:ಶರಣುಗೌಡ ಕೊಪ್ಪಳ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030