ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕ ಬಿದ್ದ ತಹಸೀಲ್ದಾರ್…!!!

Listen to this article

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಜರುಗಿದೆ.

ಗೀತಾ,ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಎಂದು ಹೇಳಲಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆಯ ರೈತ ಮಲ್ಲಿಕಾರ್ಜುನ್ ನಿಂದ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ.

33 ಗುಂಟೆ ಜಮೀನನ್ನ ಭೂ ಪರಿವರ್ತನೆ ಮಾಡಿಕೊಡಲು 3 ಲಕ್ಷ ಲಂಚಕ್ಕೆ ತಹಶಿಲ್ದಾರ್ ಗೀತಾ ಬೇಡಿಕೆಯಿಟ್ಟಿದ್ದರು. ಅದರಂತೆ ಇಂದು ಬೆಳಗ್ಗೆ 20 ಸಾವಿರ ಹಣ ಪಡೆಯುವಾಗ ಲೋಕಾ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ತಹಶಿಲ್ದಾರ್ ಗೀತಾರನ್ನ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ…

ವರದಿ.ಮುಕ್ಕಣ್ಣ ಹುಲಿಗುಡ್ಡ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend