ನಿದ್ದೆಗೆ ಜಾರಿದ ಕಾರು ಚಾಲಕ: ಭೀಕರ ಅಪಘಾತದಲ್ಲಿ 7 ಮಂದಿ ಸಾವು,,,,,!!!

Listen to this article

ನಿದ್ದೆಗೆ ಜಾರಿದ ಕಾರು ಚಾಲಕ: ಭೀಕರ ಅಪಘಾತದಲ್ಲಿ 7 ಮಂದಿ ಸಾವು,,,,,!!!!!!””””/

ದಾವಣಗೆರೆ: ಇಂಡಿಕಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಣಕಟ್ಟೆ ಟೋಲ್ ಎನ್ ಹೆಚ್ 13ರಲ್ಲಿ ನಡೆದಿದೆ.

ವರದಿಗಳ ಪ್ರಕಾರ ಕಾರು ಚಾಲಕ ಮದ್ಯದ ನಶೆಯಿಂದಾಗಿ ಕಾರು ಚಾಲನೆಯಲ್ಲಿದ್ದಾಗಲೇ ನಿದ್ರೆಗೆ ಜಾರಿದ್ದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಮೃತರ ಮಲ್ಲನ ಗೌಡ(22), ಸಂತೋಷ್(21) ಸಂಜೀವ್(20) ಜೈಭೀಮ್(18), ರಾಘು(23), ಸಿದ್ದೇಶ್(20), ವೇದಮೂರ್ತಿ(18), ಮೃತಪಟ್ಟವರು ಎಂದು ತಿಳಿದು ಬಂದಿದೆ.

ಮೃತರಲ್ಲಿ 4 ಜನ ಯಾದಗಿರಿಯ ಶಾಹಪುರದವರಾಗಿದ್ದು , 2 ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮೂಲದವರು, 01 ವಿಜಯಪುರ ಜಿಲ್ಲೆಯ ತಾಳಿಕೋಟೆಯವನೆಂದು ತಿಳಿದುಬಂದಿದೆ.

ಮಾಹಿತಿ ತಿಳಿದು ಘಟನ ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಬೆಳಗಿನ ಜಾವ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ..

ವರದಿ. ಪ್ರತಾಪ್. ಸಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend