ಕೊಟಬಾಗಿ ಗ್ರಾಮ ಪಂಚಾಯತ: ಗ್ರಾಮದಲ್ಲಿ ಜರುಗಿದ ಮತದಾನ ಜಾಗೃತಿ ಕಾರ್ಯಕ್ರಮ…!!!

Listen to this article

ಕೊಟಬಾಗಿ ಗ್ರಾಮ ಪಂಚಾಯತ: ಗ್ರಾಮದಲ್ಲಿ ಜರುಗಿದ ಮತದಾನ ಜಾಗೃತಿ ಕಾರ್ಯಕ್ರಮ

ಧಾರವಾಡ : ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ರೋಟರಿ ಕ್ಲಬ್ ವತಿಯಿಂದ ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಇತ್ತಿಚೆಗೆ  ಹಮ್ಮಿಕೊಳ್ಳಲಾಗಿತ್ತು.

ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿದ ಜಿ.ಪಂ. ಸಿಇಓ ಸ್ವರೂಪ ಟಿ.ಕೆ. ಅವರು ಮಾತನಾಡಿ, ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡಬೇಕು ಮತ್ತು ಮತದಾನ ನಮ್ಮೆಲ್ಲರ ಹಕ್ಕು ಎಂದು ಅವರು ಹೇಳಿದರು.

ಮಹಿಳೆಯರು ಹೊಲಿಗೆ ತರಬೇತಿ, ಕಂಪ್ಯೂಟರ್ ತರಬೇತಿಯನ್ನು ಪಡೆದುಕೊಂಡು ಸ್ವಂತ ಜೀವನದ ಚಟುವಟಿಕೆಯನ್ನು ಮಾಡಬೇಕು ಮತ್ತು ಸ್ವಾವಲಂಬಿಯಾಗಿ ಜೀವನ ನಡೆಸಬೇಕು. ಮತ್ತು ಪ್ರತಿ ಮಹಿಳೆ ತನ್ನ ಕುಟುಂಬದ ಎಲ್ಲ ವಯಸ್ಕ ಮತದಾರರು ತಪ್ಪದೇ ಮತ ಚಲಾವಣೆ ಮಾಡುವಂತೆ ನೋಡಿಕೊಳ್ಳಬೇಕೆಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಹೊಲಿಗೆ, ಕಂಪ್ಯೂಟರ್ ತರಬೇತಿ ಕಾರ್ಯಕ್ರಮದ ಮುಕ್ತಾಯ ಸಮಾರಂಭವು ಜರುಗಿತು.

ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ ಚಂದ್ರು ಪೂಜಾರ, ಎನ್‍ಆರ್‍ಎಲ್‍ಎಮ್ ನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ವಿನೋದ್ ಕಂಠಿ, ಮತ್ತು ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಬಸವರಾಜ ಶೆಟ್ಟಪ್ಪನವರ, ವಲಯ ಮೇಲ್ವಿಚಾರಕ ರವಿಕುಮಾರ್ ಮಡಿವಾಳರ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಜಿಪಿಎಲ್‍ಎಫ್ ನ ಅಧ್ಯಕ್ಷರು, ಪದಾಧಿಕಾರಿಗಳು, ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು….

ವರದಿ. ಮಹಾಲಿಂಗ ಗಗ್ಗರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend