ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಲೋಕಾಯುಕ್ತ  ಬಲೆಗೆ ಬಿದ್ದ ಶಿರಸ್ತೇದಾರ್…!!!

Listen to this article

ಒಂದೆಡೆ ಕಲಘಟಗಿ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್ ಲೋಕಾಯುಕ್ತ  ಬಲೆಗೆ ಬಿದ್ದರೆ, ಮತ್ತೊಂದೆಡೆ ಮಂಗಳೂರು ತಾಲೂಕು ಕಚೇರಿಯಲ್ಲಿ 4 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಭೂಮಾಪಕ ಅಧಿಕಾರಿ ಶೀತಲ್ ರಾಜ್ ಲೋಕಾಯುಕ್ತ ಖೆಡ್ಡಾಗೆ ಬಿದ್ದಿದ್ದಾರೆ.

ಜಿಲ್ಲೆಯ ಕಲಘಟಗಿ ತಹಸೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್ ಲೋಕಾಯುಕ್ತ  ಬಲೆಗೆ ಬಿದ್ದಿದ್ದಾರೆ. ಭೂ ನ್ಯಾಯ ಮಂಡಳಿ ಆದೇಶದಂತೆ ಖಾತೆ ಬದಲಿಸಿಕೊಡಲು ರೈತ ಮಲ್ಲಿಕಾರ್ಜುನ ಕುರುಬರ ಎಂಬಾತನ ಬಳಿ 45 ಸಾವಿರ ರೂ. ಲಂಚ ಪಡೆಯುವಾಗ ಕಲಘಟಗಿ ತಹಶೀಲ್ದಾರ್ ಕಚೇರಿ ಶಿರಸ್ತೆದಾರ ಸುರೇಶ್ ಅಡವಿ ರೆಡ್​ಹ್ಯಾಂಡ್​ ಆಗಿ ಸಿಕ್ಕಿ ಬಿದ್ದಿದ್ದಾನೆ. ಕೂಡಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

4ಸಾವಿರ ರೂ. ಲಂಚ ಸ್ವೀಕರಿಸುವಾಗ ಭೂಮಾಪಕ ಲೋಕಾಯುಕ್ತ ಬಲೆಗೆ

ದಕ್ಷಿಣ ಕನ್ನಡ: ತಾಲೂಕು ಕಚೇರಿಯಲ್ಲಿ 4 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಭೂಮಾಪಕ ಶೀತಲ್ ರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಮೀನಿನ ಪೋಡಿ ಮಾಡಿಕೊಡಲು ಬರೊಬ್ಬರಿ 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಭೂಮಾಪಕ ಶೀತಲ್ ರಾಜ್, ಇಂದು ರೈತನಿಂದ ಇಂದು 4 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಎಸ್​ಪಿ ಸೈಮನ್, DySP ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ರೆಡ್​ಹ್ಯಾಂಡ್​ ಆಗಿ ಬಲೆಗೆ ಬಿದ್ದಿದ್ದಾರೆ.

ಲಂಚ ಸ್ವೀಕರಿಸುವಾಗ ಕಂದಾಯ ನಿರೀಕ್ಷಕ ಲೋಕಾ ಬಲೆಗೆ

ಶಿವಮೊಗ್ಗ: ಜಿಲ್ಲೆಯ ಸೊರಬ ಪುರಸಭೆ ಕಂದಾಯ ನಿರೀಕ್ಷಕ 40 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದಿದ್ದರು. ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಗುರುವಯ್ಯ ಲೋಕಾ ಬಲೆ ಬಿದ್ದ ಅಧಿಕಾರಿ. ಲೋಕಾಯುಕ್ತ ಡಿವೈಎಸ್​​ಪಿ ಪಿ.ಉಮೇಶ್​​ ಈಶ್ವರ ನಾಯ್ಕ್​​ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು. ಖಾಲಿ ನಿವೇಶನಕ್ಕೆ ಸಂಬಂಧಿಸಿದ ಕೆಲಸ ಮಾಡಿಕೊಡಲು ಪ್ರತಿಭಾ ಎಂ.ನಾಯ್ಕ ಎಂಬುವರ ಬಳಿ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದರು….

ವರದಿ.ಮಹಾಲಿಂಗ ಗಗ್ಗರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend