ಎಲ್ಲಾ ಡಿಜಿಟಲ್ ವ್ಯವಹಾರಗಳಿಗೆ “PAN”ಕಡ್ಡಾಯ…!!!

Listen to this article

ವದೆಹಲಿ: ಐದನೇ ಬಾರಿ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡನೆ ಮಾಡುತ್ತಿದ್ದಾರೆ. ಪ್ರಸಕ್ತ ವರ್ಷದ ನಮ್ಮ ಬೆಳವಣಿಗೆಯನ್ನು 7.0% ಎಂದು ಅಂದಾಜಿಸಲಾಗಿದೆ, ಇದು ಸಾಂಕ್ರಾಮಿಕ ರೋಗ ಮತ್ತು ಯುದ್ಧದಿಂದ ಉಂಟಾದ ಬೃಹತ್ ಜಾಗತಿಕ ಮಂದಗತಿಯ ಹೊರತಾಗಿಯೂ ಎಲ್ಲಾ ಪ್ರಮುಖ ಆರ್ಥಿಕತೆಗಳಲ್ಲಿ ಅತ್ಯಧಿಕವಾಗಿದೆ ಅಂತ ತಿಳಿಸಿದರು.

ಇದೇ ವೇಳೆ ಬಜೆಟ್‌ ಮಂಡನೆಗೂ ಮುನ್ನ ಭಾರತದ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಭೇಟಿ ಮಾಡಿ ಬಜೆಟ್‌ಗೆ ಸಂಬಂಧಪಟ್ಟಂತೆ ಭೇಟಿ ಮಾಡಿದರು. ಬಳಿಕ ಅವರು ಸಂಸತ್ತು ಭವನಕ್ಕೆ ತೆರಳಿ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಭಾಗವಹಿಸಿ ಸಚಿವ ಸಂಪುಟವನ್ನು ಮುಗಿಸಿ ನೇರವಾಗಿ ಬಜೆಟ್‌ ಕಲಾಪಕ್ಕೆ ಆಗಮಿಸಿದರು. ಬಜೆಟ್‌ ಮಂಡನೆಗೂ ಮುನ್ನ ಮಾತನಾಡಿದ ಅವರು ಅಮೃತ ಕಾಲದ ಮೊದಲ ಬಜೆಟ್‌ ಇದಾಗಿದ್ದು, ಭಾರತದ ಆರ್ಥಿಕತೆಯು ಸರಿಯಾದ ಹಾದಿಯಲ್ಲಿದೆ ಮತ್ತು ಉಜ್ವಲ ಭವಿಷ್ಯದತ್ತ ಸಾಗುತ್ತಿದೆ ಅಂತ ತಿಳಿಸಿದರು. ಮಹಿಳೆಯರು, ಯುವಕರು, ಒಬಿಸಿ ದಲಿತರಿಗೆ ಮನ್ನಣೆ ನೀಡುವುದು ನಮಗೆ ಬಹಳ ಮುಖ್ಯುವಾಗಿದೆ. ಇದಲ್ಲದೇ ಕೋವಿನ್‌, ಆಧಾರ್‌, ಯುಪಿಐ ವಿಶ್ವದ ಮಾನ್ಯತೆಯನ್ನು ಪಡೆದುಕೊಂಡಿದೆ ಅಂತ ತಿಳಿಸಿದರು. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, 28 ತಿಂಗಳವರೆಗೆ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ಪೂರೈಸುವ ಯೋಜನೆಯೊಂದಿಗೆ ಯಾರೂ ಹಸಿವಿನಿಂದ ಮಲಗದಂತೆ ನಾವು ಖಚಿತಪಡಿಸಿದ್ದೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಇದೇ ವೇಳೆ ಅವರು ಗರೀಬ್‌ ಕಲ್ಯಾಣ ಯೋಜನೆ ಮುಂದಿನ ಒಂದು ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ ಅಂತ ತಿಳಿಸಿದರು.

2014 ರಿಂದ ಭಾರತದಾದ್ಯಂತ 157 ಹೊಸ ನರ್ಸಿಂಗ್‌ ಕಾಲೇಜು ಆರಂಭವಾಗಿದೆ ಅಂತ ತಿಳಿಸಿದರು. ಇದೇ ವೇಳೆ ಅವರುಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡಿ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲಾಗುವುದು ಅಂತ ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಸ್ಟಾರ್ಟ್ ಅಪ್ ಗಳನ್ನು ಉತ್ತೇಜಿಸಲು ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು ಅಂಥ ಅವರು ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಭದ್ರ ಮೇಲ್ಡಂಡೆ ಯೋಜನೆಗೆ 5630 ರೂಕೋಟಿ ಹಣವನ್ನು ಮೀಸಲು ಇಡುವುದಾಗಿ ಘೋಷಣೆ ಮಾಡಿದರು. ಇನ್ನೂ ‘ಪ್ಯಾನ್ ಅನ್ನು ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ಸಾಮಾನ್ಯ ಗುರುತಿಸುವಿಕೆಯಾಗಿ ಬಳಸಲಾಗುವುದು ಅಂತ ತಿಳಿಸಿದರು. ನಿರ್ದಿಷ್ಟ ಸರ್ಕಾರಿ ಸಂಸ್ಥೆಗಳ ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ಪ್ಯಾನ್ ಅನ್ನು ಸಾಮಾನ್ಯ ಗುರುತಿಸುವಿಕೆಯಾಗಿ ಬಳಸಲಾಗುವುದು. ಸುಗಮವಾಗಿ ವಾಣಿಜ್ಯ ನಡೆಸಲು ಒತ್ತು ನೀಡಲಾಗುವುದು ಅಂತ ತಿಳಿಸಿದರು…

ವರದಿ. ನ್ಯೂಸ್ ಬ್ಯುರೋ, ಎಚ್ಚರಿಕೆ ಕನ್ನಡ ನ್ಯೂಸ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend