ಚಿತ್ರದುರ್ಗ: ನಾಯಕನಹಟ್ಟಿ (ಜೂ.7) ಯುವ ಕಾಂಗ್ರೆಸ್ ವತಿಯಿಂದ ಪ್ರತಿದಿನ 150 ಜನಕ್ಕೆ ಊಟದ ವ್ಯವಸ್ಥೆ ಮಾಡಿ ಕೊಡಲಾಗಿದೆ. ಇದರಿಂದ ಆರೋಗ್ಯ ಸಿಬ್ಬಂದಿಗಳಿಗೆ, ಗ್ರಾಮೀಣ ಭಾಗದ ಬಡ ರೋಗಿಗಳಿಗೆ, ಆರೋಗ್ಯ ಕೇಂದ್ರಗಳಿಗೆ ಬರುವ ಬಡಜನರಿಗೆ ಬಹಳ ಉಪಯೋಗವಾಗುವಂತ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ ಸರ್ಕಾರಿ ಆರೋಗ್ಯ ಕೇಂದ್ರ, ಇಂದಿರಾಗಾಂಧಿ ವಸತಿ ಶಾಲೆಯ ಛಾವಜ ಕೇಂದ್ರ, ಮುಷ್ಠಲಾಗುಮ್ಮಿ ಪ್ರಾಥಮಿಕ ಆರೋಗ್ಯ ಕೇಂದ್ರ, ನೆಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರ ಗಳಿಗೆ 3ನೇ ದಿನ “ಅನ್ನ ಸಮರ್ಪಣಾ ” ಕಾರ್ಯಕ್ರಮವನ್ನು ಯುವ ಕಾಂಗ್ರೆಸ್ ಮುಖಂಡರುಗಳಿಂದ ಯಶಸ್ವಿಯಾಗಿ ಮುಂದಿವರೆಸುತಿದ್ದು ನಮಗೆ ಸಹಕಾರ ನೀಡಿದ ಎಲ್ಲಾ ಮುಖಂಡರುಗಳಿಗೆ ಧನ್ಯವಾದಗಳು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಮೇಶ್ ಗೌಡ ಧನ್ಯವಾದ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಯುವ ಮುಖಂಡರಾದ ಮಧು ತೊರೆಕೋಲಮ್ಮನಹಳ್ಳಿ, ತೊರೆಕೋಲಮ್ಮನಹಳ್ಳಿ ನವೀನ ಉಪಸ್ಥಿತರಿದ್ದರು.
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030