ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣದ ವ್ಯಾಪ್ತಿಯ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ಕೊರಡಿಹಳ್ಳಿಯಲ್ಲಿ ಇಂದು (ಜೂ,18) ರಂದು ಮನೆ ಮನೆಗೂ ತೆರಳಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲೇಬೋರನಹಟ್ಟಿ ಬಿ. ಶಂಕರಸ್ವಾಮಿ ಸೇರಿ ಆಡಳಿತ ಮಂಡಳಿ ಸದಸ್ಯರು ಶುಕ್ರವಾರ ಮಾಸ್ಕ್ ಗಳನ್ನು ವಿತರಿಸಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಬಿ.ಶಂಕರಸ್ವಾಮಿ ಮಾತನಾಡಿ, ಸರ್ಕಾರ ಲಾಕ್ಡೌನ್ ಸಡಿಲಿಕೆ ಮಾಡಿದೆ ಎಂದು ಹೊರಗಡೆ ತಿರುಗಾಡುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಕೋವಿಡ್ ಮೂರನೇ ಅಲೆ ಬರುವ ಸಾಧ್ಯತೆಯನ್ನು ತಜ್ಞರು ಹೇಳಿರುವುದರಿಂದ ಎಚ್ವರಿಕೆಯಿಂದ ಇರಬೇಕು. ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ತಿಳಿಸಿದರು. ಗ್ರಾಪಂ ಪಿಡಿಒ ಶಶಿಕಲಾ ಮಾತನಾಡಿ, ಮಕ್ಕಳ ಆರೋಗ್ಯ ಬಗ್ಗೆ ಪಾಲಕರು ಗಮನಹರಿಸಬೇಕು. ಕೊರೋನಾ ಸೋಂಕು ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಆದ್ದರಿಂದ ಜನರು ಮುಖಕ್ಕೆ ಮಾಸ್ಕ್ ಧರಿಸುವುದು, ಆಗಾಗ ಕೈಗಳನ್ನು ತೊಳೆದುಕೊಳ್ಳುವುದು ಸೇರಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕೆ.ಸಿ.ರಾಧಾ ರೇವಣ್ಣ, ಸದಸ್ಯೆ ಪಾಪಮ್ಮ ಸೇರಿ ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030