ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯಿಂದ 1 ಲಕ್ಷ ರೂಗಳ ಚೆಕ್ ವಿತರಣೆ ; ಕಾನಾಹೊಸಹಳ್ಳಿ ; ಮಾರ್ಚ್ 20 , ಬಣವಿಕಲ್ಲು ಗ್ರಾಮದಲ್ಲಿನ ನೆಲಬೊಮ್ಮನಹಳ್ಳಿ ರಸ್ತೆಯಲ್ಲಿ ಇರುವ ಪುರಾತನ ಕಾಲದ ಶ್ರೀ ಈಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಯೋಜನೆಯಿಂದ 1, ಲಕ್ಷ ರೂಗಳ ಚೆಕ್ ವಿತರಣೆ ಮಾಡಿದರು . ನಂತರ ಶ್ರೀ ಈಶ್ವರ ದೇವಸ್ಥಾನದ ಟ್ರಸ್ಟ್ ನವರಿಗೆ ಚೆಕ್ ನೀಡಿ ಮಾತನಾಡಿದ ಕೊಟ್ಟೂರು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳದ ಯೋಜನಾಧಿಕಾರಿ ಟಿ.ಜಿ.ನವೀನ್ ಕುಮಾರ್ ಅವರು ನಮ್ಮ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆ ಅವರು ರಾಜ್ಯದ ಉದ್ದಗಲಕ್ಕೂ ಇರುವ ಗ್ರಾಮೀಣ ಭಾಗದ ಎಲ್ಲಾ ದೇವಸ್ಥಾನಗಳು ಮತ್ತು ಇನ್ನಿತರ ಒಳ್ಳೆಯ ಕಾರ್ಯಗಳಿಗೆ ಸದ್ಬಳಕೆ ಮಾಡಿಕೊಳ್ಳಲು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಪ್ರಸಾದದ ರೂಪದಲ್ಲಿ ಹಣವನ್ನು ನೀಡುತ್ತಾ ಬಂದಿದ್ದಾರೆ ಎಂದು ಹೇಳಿದರು . ಈ ಸಂದರ್ಭದಲ್ಲಿ ಬಣವಿಕಲ್ಲು ಶ್ರೀ ಈಶ್ವರ ದೇವಸ್ಥಾನದ ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ಸಿಬ್ಬಂದಿ ವರ್ಗ ಮತ್ತು ಇನ್ನಿತರರು ಉಪಸ್ಥಿತರಿದ್ದರು …
ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030