ಮಹನೀಯರ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆ
ವಿಜಯನಗರ ಜಿಲ್ಲೆ(ಹೊಸಪೇಟೆ): ವಿಜಯನಗರ ಜಿಲ್ಲೆಯ ಅಪರಜಿಲ್ಲಾಧಿಕಾರಿ ಮಹೇಶ್ಬಾಬು ಅವರ ಅಧ್ಯಕ್ಷತೆಯಲ್ಲಿ ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹನೀಯರ ಜಯಂತಿಯ ಪೂರ್ವಭಾವಿ ಸಿದ್ದತಾ ಸಭೆ ನಡೆಯಿತು.
ವಿಜಯನಗರ ಜಿಲ್ಲಾಡಳಿತದ ವತಿಯಿಂದ ಜ.15ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಜ.19ರಂದು ಮಹಾಯೋಗಿ ವೇಮನ ಜಯಂತಿ ಮತ್ತು ಜ.21ರಂದು ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಮಹೇಶ ಬಾಬು ಅವರು ತಿಳಿಸಿದರು.
ಸಂಬಂಧಿಸಿದ ಸಮಾಜದ ಭಾಂಧವರು ಹಾಗೂ ಅಸಕ್ತರು ಕೋವಿಡ್-19 ನಿಯಮಾವಳಿಗಳನ್ವಯ ಭಾಗವಹಿಸಬೇಕೆಂದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಮಾಜದ ಬಾಂಧವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ವರದಿ. ವಿರೇಶ್ ಬಳ್ಳಾರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030