73ನೇ ಗಣರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆ
ಶಿಷ್ಟಾಚಾರ ನಿಯಮಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಿ:ಡಿಸಿ ಮಾಲಪಾಟಿ
ಬಳ್ಳಾರಿ, ಗಣರಾಜ್ಯೋತ್ಸವ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಮತ್ತು ತಮಗೆ ವಹಿಸಲಾದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಇಂತಹ ಸಂದರ್ಭದಲ್ಲಿ ಯಾವುದೇ ರೀತಿಯ ಶಿಷ್ಟಾಚಾರ ನಿಯಮಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಕಟ್ಟಪ್ಪಣೆ ವಿಧಿಸಿದ್ದಾರೆ.
73ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಸೋಮವಾರ ವರ್ಚುವಲ್ ಮೂಲಕ ಆಯೋಜಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ಗಣರಾಜ್ಯೋತ್ಸವ ನಿಮಿತ್ತ ಜ.26ರಂದು ಬೆಳಗ್ಗೆ 9ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ,ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಧ್ವಜಾರೋಹಣ ಸಂದೇಶ ನೀಡಲಿದ್ದಾರೆ. ಇದಕ್ಕೂ ಮುಂಚೆ ಸಚಿವರು ಗವಿಯಪ್ಪ ವೃತ್ತದಲ್ಲಿರುವ 150 ಅಡಿ ಎತ್ತರದ ಬೃಹತ್ ಧ್ವಜಾರೋಹಣ ನೆರವೇರಿಸುವರು ಮತ್ತು ವಿಮ್ಸ್ ಬಳಿಯ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ ಎಂದರು.
ಸ್ವಾಗತ ಸಮಿತಿ,ಪರೇಡ್ ಸಮಿತಿ,ಸನ್ಮಾನ ಸಮಿತಿ,ಬಂದೋಬಸ್ತ್ ಸಮಿತಿ, ಆರೋಗ್ಯ ಸಮಿತಿ,ಪ್ರಚಾರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಗಳಲ್ಲಿರುವ ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಬೇಕು;ಯಾವುದೇ ರೀತಿಯ ಲೋಪದೋಷಗಳಿಗೆ ಅಸ್ಪದ ನೀಡದಂತೆ ಎಂದರು.
*ಕೋವಿಡ್ ನಿಯಮಗಳ ಪಾಲನೆಗೆ ವಿಶೇಷ ಒತ್ತು*: ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಗಣರಾಜ್ಯೋತ್ಸವ ಆಚರಿಸೋಣ. ಕೋವಿಡ್ ಮುಂಜಾಗ್ರತಾ ಕ್ರಮಗಳು ಕೈಗೊಳ್ಳಲು ಮತ್ತು ಪಾಲನೆ ಮಾಡಲು ಆರೋಗ್ಯ ಇಲಾಖೆಯಿಂದ ವಿಶೇಷ ತಂಡ ನಿಯೋಜಿಸಲು ಅವರು ಸೂಚಿಸಿದರು.
ಕ್ರೀಡಾಂಗಣದಲ್ಲಿನ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಲಘು ಉಪಹಾರದ ವ್ಯವಸ್ಥೆ, ರಿಹರ್ಸಲ್ಗೆ ಅಗತ್ಯ ಸಿದ್ಧತೆ ಸೇರಿದಂತೆ ಇನ್ನೀತರ ಸಿದ್ಧತೆಗಳನ್ನು ಕೂಡಲೇ ಅಧಿಕಾರಿಗಳು ಕೈಗೊಳ್ಳುವಂತೆ ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಮಾತನಾಡಿ, ಸರಕಾರಿ ಕಚೇರಿಗಳಲ್ಲಿ ಮತ್ತು ಪ್ರಮುಖ ವೃತ್ತಗಳಲ್ಲಿ ಜ.25 ಮತ್ತು 26ರಂದು ಎರಡು ದಿನಗಳ ಕಾಲ ವಿದ್ಯುತ್ ದೀಪಾಲಂಕಾರ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದರು.
ಸಚಿವರ ಸಂದೇಶಕ್ಕೆ ವಿವಿಧ ಇಲಾಖೆಗಳಲ್ಲಿ ಸಾಧಿಸಲಾಗಿರುವ ಪ್ರಮುಖ ಪ್ರಗತಿಯ ಅಂಶಗಳನ್ನು ಇದೇ 20ರೊಳಗಾಗಿ ಜಿಲ್ಲಾಡಳಿತ ಅಥವಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ತಲುಪಿಸುವಂತೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು….
ವರದಿ. ವಿರೇಶ್ ಹಳೇಕೋಟೆ, ಬಳ್ಳಾರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030