ಸೋಮಸಮುದ್ರ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಭೇಟಿ…!!!

Listen to this article

ಸೋಮಸಮುದ್ರ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಭೇಟಿ
ಬಳ್ಳಾರಿ, ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ಬುಧವಾರ ರಾತ್ರಿ ಬೀಸಿದ ಭಾರಿ ಗಾಳಿ ಮತ್ತು ಸುರಿದ ಧಾರಾಕಾರ ಮಳೆಗೆ ಗ್ರಾಮದಲ್ಲಿ ಮರಗಳು,ವಿದ್ಯುತ್ ಕಂಬಗಳು ಬಿದ್ದಿರುವುದು ಮತ್ತು ಮನೆಗಳು ಜಖಂಗೊಂಡ ಸುದ್ದಿ ತಿಳಿದ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಗುರುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು ಮತ್ತು ಹಾನಿಯಾಗಿರುವುದನ್ನು ಪರಿಶೀಲಿಸಿದರು. ವಿದ್ಯುತ್ ಕಂಬಗಳನ್ನು ಕೂಡಲೇ ದುರಸ್ತಿ ಮಾಡಲು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಗ್ರಾಮಲೆಕ್ಕಿಗರಿಗೆ ಹಾನಿಪ್ರಮಾಣದ ವರದಿಗೆ ಸಂಬಂಧಿಸಿದಂತೆ ಕೆಲ ಸೂಚನೆಗಳನ್ನು ನೀಡಿದರು…

ವರದಿ. ವಿರೇಶ್, ಎಚ್, ಸಿರಿಗುಪ್ಪ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend