ಅಬಕಾರಿ ಪೊಲೀಸ್ ಅಧಿಕಾರಿಗಳಿಂದ ದಾಳಿ: ಮದ್ಯ ವಶ…!!!

Listen to this article

ಅಬಕಾರಿ ಪೊಲೀಸ್ ಅಧಿಕಾರಿಗಳಿಂದ ದಾಳಿ: ಮದ್ಯ ವಶ

ಬಳ್ಳಾರಿ,:ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ, ಬುಧವಾರದಂದು ಅಬಕಾರಿ ಪೊಲೀಸ್ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ ಅಕ್ರಮ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ ಅವರು ತಿಳಿಸಿದ್ದಾರೆ.
ಕಂಪ್ಲಿ ಪಟ್ಟಣದ ಕಂಪ್ಲಿ-ಬಳ್ಳಾರಿ ರಸ್ತೆಯಲ್ಲಿ ರಸ್ತೆಗಾವಲು ಮಾಡುವ ಸಮಯದಲ್ಲಿ ಟಿವಿಎಸ್ ಎಕ್ಸ್‍ಎಲ್ ಸೂಪರ್ ಹೆವಿಡ್ಯೂಟಿ ಕಪ್ಪು ಮತ್ತು ಹಸಿರು ಬಣ್ಣದ ದ್ವಿಚಕ್ರ ವಾಹನದಲ್ಲಿ 17.280 ಲೀ. (ಅಂದಾಜು ಮೌಲ್ಯ ರೂ.27700) ಮದ್ಯ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಾಹನ ಸಾವರನನ್ನು ವಶಕ್ಕೆ ಪಡೆದುಕೊಂಡು ಮದ್ಯ ಹಾಗೂ ವಾಹನವನ್ನು ಜಪ್ತು ಮಾಡಿ ಪ್ರಕರಣ ದಾಖಲಿದೆ.
ಕುರುಗೋಡು ತಾಲ್ಲೂಕಿನ ಬಳ್ಳಾರಿ-ಸಿರುಗುಪ್ಪ ಮುಖ್ಯ ರಸ್ತೆಯ ಸೋಮಸಮುದ್ರ ಕ್ರಾಸ್‍ನಲ್ಲಿ ರಸ್ತೆಗಾವಲು ಸಮಯದಲ್ಲಿ ನೋಂದಣಿ ಸಂಖ್ಯೆ ಇಲ್ಲದ ಕಂದು ಬಣ್ಣದ ಟಿವಿಎಸ್ ಎಕ್ಸ್‍ಎಲ್ 100 ಹೆವಿಡ್ಯೂಟಿ ದ್ವಿಚಕ್ರ ವಾಹನದಲ್ಲಿ 38.160 ಲೀ ಮದ್ಯ ಹಾಗೂ 15.600 ಲೀ ಬಿಯರ್ (ಅಂದಾಜು ಮೌಲ್ಯ ರೂ.40940) ಅನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಾಹನ ಸಾವರನನ್ನು ವಶಕ್ಕೆ ಪಡೆದುಕೊಂಡು ಮದ್ಯ, ಬಿಯರ್ ಹಾಗೂ ವಾಹನವನ್ನು ಜಪ್ತುಪಡಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ….

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend