ಡಾ.ಬಾಬು ಜಗಜೀವನ್ ರಾಮ್ ಜಯಂತಿ: ಜಿಲ್ಲಾಡಳಿತದಿಂದ ಸರಳ ಮತ್ತು ಸಾಂಕೇತಿಕ ಆಚರಣೆ…!!!

Listen to this article

ಡಾ.ಬಾಬು ಜಗಜೀವನ್ ರಾಮ್ ಜಯಂತಿ: ಜಿಲ್ಲಾಡಳಿತದಿಂದ ಸರಳ ಮತ್ತು ಸಾಂಕೇತಿಕ ಆಚರಣೆ

ಬಳ್ಳಾರಿ,:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಭಾರತದ ಮಾಜಿ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ 117ನೇ ಜಯಂತಿ ಅಂಗವಾಗಿ ಶುಕ್ರವಾರದಂದು ನಗರದ ನಲ್ಲಚೆರುವು ಪ್ರದೇಶದ ಡಾ.ಬಾಬು ಜಗಜೀವನ್ ರಾಮ್ ಭವನದ ಮುಂಭಾಗದಲ್ಲಿನ ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪುಷ್ಪ ನಮನ ಸಲ್ಲಿಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಿರುವುದರಿಂದ ಸರಳ ಮತ್ತು ಸಾಂಕೇತಿಕವಾಗಿ ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಎನ್ ಝುಬೇರ್, ಹೆಚ್ಚುವರಿ ಪೋಲೀಸ್ ವರಿಷ್ಟಧಿಕಾರಿ ನವೀನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮಮತಾ.ಪಿ ಸೇರಿದಂತೆ ಅಧಿಕಾರಿ, ಸಿಬ್ಬಂದಿ ವರ್ಗದವರು ಸೇರಿದಂತೆ ದಲಿತ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು….

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend