ಮತ ಎಣಿಕಾ ಕೇಂದ್ರಕ್ಕೆ ಚುನಾವಣಾ ವೀಕ್ಷಕರೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ…!!!

Listen to this article

ಮತ ಎಣಿಕಾ ಕೇಂದ್ರಕ್ಕೆ ಚುನಾವಣಾ ವೀಕ್ಷಕರೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ
ಸುಗಮ ಮತ ಎಣಿಕಾ ಕಾರ್ಯಕ್ಕೆ ಕೈಗೊಂಡಿರುವ ಸಿದ್ಧತೆಗಳ ಕುರಿತು ಮನವರಿಕೆ

ಬಳ್ಳಾರಿ: ಲೋಕಸಭಾ ಸ್ಥಾನಕ್ಕಾಗಿ ಮೇ 07 ರಂದು ಮತದಾನ ನಡೆಯಲಿದ್ದು, ಮತಗಳ ಎಣಿಕಾ ಕಾರ್ಯ ಜೂ.04 ರಂದು ಬಳ್ಳಾರಿ ನಗರದ ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜು ಕಟ್ಟಡದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಲಾವಣೆಗೊಂಡ ಮತಯಂತ್ರಗಳ ಸಂಗ್ರಹಾ ಕೊಠಡಿ (ಸ್ಟ್ರಾಂಗ್ ರೂಂ) ಹಾಗೂ ಮತಗಳ ಎಣಿಕಾ ಕಾರ್ಯಕ್ಕೆ ಕೈಗೊಳ್ಳಲಾಗುತ್ತಿರುವ ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಚುನಾವಣಾ ಸಾಮಾನ್ಯ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರಿಗೆ ಮಾಹಿತಿ ನೀಡಿ ಮನವರಿಕೆ ಮಾಡಿಕೊಟ್ಟರು.


ಬಳ್ಳಾರಿ ನಗರದ ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜು ಕಟ್ಟಡಕ್ಕೆ ಮಂಗಳವಾರ ಚುನಾವಣಾ ವೀಕ್ಷಕರೊಂದಿಗೆ ಭೇಟಿ ನೀಡಿದ ಅವರು ಡಿಮಸ್ಟರಿಂಗ್ ಹಾಗೂ ಮತ ಎಣಿಕೆ ಕಾರ್ಯಗಳ ಸಿದ್ಧತೆಗಳ ಕುರಿತು ಚುನಾವಣಾ ವೀಕ್ಷಕರಿಗೆ ಮಾಹಿತಿ ನೀಡಿದರು.
ಬಳ್ಳಾರಿ ಜಿಲ್ಲೆಯಲ್ಲಿ ಚುನಾವಣೆ ಪ್ರಕ್ರಿಯೆಗಳನ್ನು ಅತ್ಯಂತ ಪಾರದರ್ಶಕವಾಗಿ ಕೈಗೊಳ್ಳಲಾಗುತ್ತಿದೆ. ಲೋಕಸಭೆ ಚುನಾವಣೆ ನಿಮಿತ್ಯ ಮೇ 07 ರಂದು ಮತದಾನ ನಡೆಯಲಿದ್ದು, ಅದೇ ದಿನ ಸಂಜೆ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಡಗಲಿ, ಹಗರಿಬೊಮ್ಮನಹಳ್ಳಿ, ವಿಜಯನಗರ, ಕಂಪ್ಲಿ, ಬಳ್ಳಾರಿ (ಗ್ರಾಮೀಣ), ಬಳ್ಳಾರಿ (ನಗರ), ಸಂಡೂರು ಹಾಗೂ ಕೂಡ್ಲಿಗಿ ಸೇರಿದಂತೆ ಒಟ್ಟು 08 ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಕಾಲೇಜು ಕಟ್ಟಡದಲ್ಲಿಯೇ ಪ್ರತ್ಯೇಕ ಕೊಠಡಿಗಳಲ್ಲಿ ಸಂಗ್ರಹಿಸಲಾಗುವುದು. ಮತಯಂತ್ರಗಳನ್ನು ಅತ್ಯಂತ ಭದ್ರತೆಯಲ್ಲಿ, ನಿಯಮಾನುಸಾರ ಇರಿಸಲಾಗುವುದು ಎಂದರು.


ಮತಗಳ ಎಣಿಕಾ ಕಾರ್ಯ ಜೂ.04 ರಂದು ಇದೇ ಕಾಲೇಜಿನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಇದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೆ ಪ್ರಾರಂಭಿಸಲಾಗಿದೆ. ಕಾಲೇಜು ಕಟ್ಟಡದ ನೆಲ ಮಹಡಿ, ಮೊದಲನೆ ಮಹಡಿ ಹಾಗೂ ಎರಡನೆ ಮಹಡಿಯನ್ನು ಸ್ಟ್ರಾಂಗ್ ರೂಂ ಗಾಗಿ ಹಾಗೂ ಮತ ಎಣಿಕಾ ಕಾರ್ಯಗಳಿಗೆ ಬಳಸಿಕೊಳ್ಳಲಾಗುವುದು. ಕಾಲೇಜು ಕಟ್ಟಡ ಸುತ್ತ ಇರುವ ಕಾಂಪೌಂಡ್ ವ್ಯವಸ್ಥೆ, ಕೈಗೊಳ್ಳಲಾಗುವ ಬಂದೋಬಸ್ತ್ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿಗಳು ವಿವರಗಳನ್ನು ಒದಗಿಸಿದರು.
ಬಳ್ಳಾರಿ ಕ್ಷೇತ್ರ ಚುನಾವಣಾ ವೀಕ್ಷಕ ಚಂದ್ರಶೇಖರ ಸಖಮುರಿ ಅವರು, ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಬರುವ ಮತಯಂತ್ರಗಳನ್ನು ಇಡುವ ಸ್ಟ್ರಾಂಗ್ ರೂಂ ಗಳಿಗೆ ಹಾಗೂ ಮತ ಎಣಿಕಾ ಕೊಠಡಿಗಳಿಗೆ ಭೇಟಿ ನೀಡಿ, ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಇಡೀ ಕಾಲೇಜು ಕಟ್ಟಡದ ನೀಲಿ ನಕ್ಷೆಯನ್ನು ಪಡೆದು, ಯಾವ ಯಾವ ಕೊಠಡಿಯಲ್ಲಿ ಯಾವ ಕ್ಷೇತ್ರದ ಮತಯಂತ್ರಗಳನ್ನು ಇರಿಸುವುದು ಹಾಗೂ ಮತ ಎಣಿಕೆ ನಡೆಸಲಾಗುವುದು ಎಂಬುದರ ಮಾಹಿತಿ ಪಡೆದು ಕೂಲಂಕಷವಾಗಿ ಪರಿಶೀಲಿಸಿದರು.


ಸ್ಟ್ರಾಂಗ್ ರೂಂ ಸಿದ್ಧಪಡಿಸುವುದು, ಬಂದೋಬಸ್ತ್ ಹಾಗೂ ಮತ ಎಣಿಕಾ ಕೊಠಡಿಗಳ ಸಿದ್ಧತೆಗಳು, ಅಂಚೆ ಮತಗಳ ಎಣಿಕೆಗೆ ಸಿದ್ಧತೆಗಳು, ಚುನಾವಣಾ ಏಜೆಂಟರು, ಸಿಬ್ಬಂದಿಗಳ ಆಗಮನ, ನಿರ್ಗಮನ ವಿಷಯಗಳು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇರಬೇಕು, ಕಟ್ಟಡದಲ್ಲಿ ವಿದ್ಯುತ್ ಸಂಪರ್ಕ ಸುರಕ್ಷತೆ, ಕೊಠಡಿಗಳ ಸುರಕ್ಷತೆ ಕುರಿತು ಅತ್ಯಂತ ಎಚ್ಚರಿಕೆ ವಹಿಸಬೇಕು. ಸುಗಮ ಡಿಮಸ್ಟರಿಂಗ್ ಹಾಗೂ ಮತ ಎಣಿಕಾ ಕಾರ್ಯ ನಡೆಸಲು ಕೆಲವು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಬಳ್ಳಾರಿ ಲೋಕಸಭಾ ಚುನಾವಣೆಯ ಪೊಲೀಸ್ ವೀಕ್ಷಕ ಧರ್ಮೇಂದ್ರ ಸಿಂಗ್ ಭದೌರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು ಅವರು ಉಪಸ್ಥಿತರಿದ್ದರು….

ವರದಿ. ಉಮೇಶ್, ಕೆ, ಸಿರಿಗುಪ್ಪ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend