ಬಳ್ಳಾರಿ ರೈಲ್ವೆ ಪೊಲೀಸರ ಕಾರ್ಯಾಚರಣೆ 06 ಕೆ.ಜಿ. ಗಾಂಜಾ ವಶ, ಓರ್ವ ಆರೋಪಿಯ ಬಂಧನ…!!!

Listen to this article

ಬಳ್ಳಾರಿ ರೈಲ್ವೆ ಪೊಲೀಸರ ಕಾರ್ಯಾಚರಣೆ
06 ಕೆ.ಜಿ. ಗಾಂಜಾ ವಶ, ಓರ್ವ ಆರೋಪಿಯ ಬಂಧನ

ಬಳ್ಳಾರಿ :ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಅಕ್ರಮ ಚಟುವಟಿಕೆಗಳ ತಡೆಗೆ ತೀವ್ರ ನಿಗಾ ವಹಿಸಲಾಗುತ್ತಿದ್ದು, ಇದರ ಅಂಗವಾಗಿ ಬಳ್ಳಾರಿ ರೈಲ್ವೆ ಪೊಲೀಸರು ಕಳೆದ ಏ.28 ಭಾನುವಾರದಂದು ಮೈಸೂರು-ಹುಬ್ಬಳ್ಳಿ ಮಾರ್ಗದ ಹಂಪಿ ಎಕ್ಸ್‍ಪ್ರೆಸ್ ರೈಲಿನಲ್ಲಿ ತಪಾಸಣೆ ನಡೆಸುವ ಸಂದರ್ಭದಲ್ಲಿ 06 ಕೆ.ಜಿ. ಗಾಂಜಾ ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಿ, ಓರ್ವ ಆರೋಪಿಯನ್ನು ಗಾಂಜಾ ಸಮೇತ ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಯನ್ನು ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆ ಗುಂತಕಲ್‍ನ ತಿಲಕ್ ನಗರದ ವಾಸಿ 38 ವರ್ಷ ವಯಸ್ಸಿನ ರಘು ಶಂಕರ್ ಎಂದು ಗುರುತಿಸಲಾಗಿದ್ದು, ಆರೋಪಿಯು ಹಂಪಿ ಎಕ್ಸ್‍ಪ್ರೆಸ್ ರೈಲಿನಲ್ಲಿ ತಲಾ 01 ಕೆ.ಜಿ. ತೂಕದ 06 ಪಾಕೆಟ್ ಅಂದರೆ ಒಟ್ಟು 06 ಕೆ.ಜಿ. ಯಷ್ಟು ಗಾಂಜಾ ಸಾಗಿಸುತ್ತಿದ್ದುದನ್ನು ಬಳ್ಳಾರಿ ರೈಲ್ವೆ ಪೊಲೀಸರು ಪತ್ತೆಹಚ್ಚಿದ್ದಾರೆ. 06 ಕೆ.ಜಿ. ಗಾಂಜಾದ ಮೌಲ್ಯ 06 ಲಕ್ಷ ರೂ. ಗಳೆಂದು ಅಂದಾಜಿಸಲಾಗಿದೆ. ಆರೋಪಿಯನ್ನು ಬಂಧಿಸಿ, ನಿಯಮಾನುಸಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪ್ರಕರಣ ಕುರಿತು ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಡಿವಿಜನಲ್ ಸೆಕ್ಯುರಿಟಿ ಕಮಿಷನರ್, ಅವರು ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗದ ಚುನಾವಣಾ ಶಾಖೆಗೆ ವರದಿ ಸಲ್ಲಿಸಿದ್ದಾರೆ.

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend