ವಿವಿಧೆಡೆ ಅಬಕಾರಿ ಪೊಲೀಸ್ ಅಧಿಕಾರಿಗಳಿಂದ ದಾಳಿ: 03 ಪ್ರಕರಣ ದಾಖಲು
ಬಳ್ಳಾರಿ:ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಸಂಬಂಧಿಸಿದಂತೆ ಅಬಕಾರಿ ಪೊಲೀಸ್ ಅಧಿಕಾರಿಗಳಿಂದ ವಿವಿಧೆಡೆ ದಾಳಿ ನಡೆಸಿ 03 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಮಂಜುನಾಥ.ಎನ್ ಅವರು ತಿಳಿಸಿದ್ದಾರೆ.
ಬಳ್ಳಾರಿ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಇರುವ ಜೋಳದರಾಶಿ ದೊಡ್ಡನಗೌಡರ ರಂಗಮಂದಿರದ ಗೇಟ್ ಮುಂದೆ ಮುಖ್ಯ ರಸ್ತೆಯಲ್ಲಿ ರಸ್ತೆಗಾವಲು ವೇಳೆ ದ್ವಿಚಕ್ರ ವಾಹನದಲ್ಲಿ 8.640 ಲೀ. (ಅಂದಾಜು ಮೌಲ್ಯ ರೂ.13840) ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಾಹನ ಸವಾರ ವಶಕ್ಕೆ ಪಡೆದುಕೊಂಡು ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಲಾಗಿದೆ.
ಸಿರುಗುಪ್ಪ ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ರಸ್ತೆಗಾವಲು ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ 8.640 ಲೀಟರ್ ಮದ್ಯ ಮತ್ತು 15.600 ಲೀಟರ್ ಬಿಯರ್ (ಅಂದಾಜು ಮೌಲ್ಯ ರೂ.42501) ಅನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಾಹನ ಸವಾರನ್ನು, ಮದ್ಯ, ಬಿಯರ್ ಹಾಗೂ ವಾಹನವನ್ನು ಜಪ್ತುಪಡಿಸಿ ಪ್ರಕರಣ ದಾಖಲಿಸಲಾಗಿದೆ.
ಬಳ್ಳಾರಿ ನಗರದ ಹೊಸಪೇಟೆ ರಸ್ತೆಯಲ್ಲಿ ರಸ್ತೆಗಸ್ತು ವೇಳೆ ದ್ವಿಚಕ್ರ ವಾಹನದಲ್ಲಿ 4.320 ಲೀ. (ಅಂದಾಜು ಮೌಲ್ಯ ರೂ.46920) ಮದ್ಯವನ್ನು ಪತ್ತೆಹಚ್ಚಿ, ವಾಹನ ಸವಾರ, ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಿ ಮಾಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…
ವರದಿ. ವಿರೇಶ್, ಎಚ್, ಬಳ್ಳಾರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030