ವೈ.ಕಗ್ಗಲ್ ಕ್ರಾಸ್:ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂದನ.
ಬಳ್ಳಾರಿ: ಶಿವಮೊಗ್ಗಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ವೈ.ಕಗ್ಗಲ್ ಕ್ರಾಸ್ ಬಳಿ ಮೂವರು ಆರೋಪಿಗಳನ್ನು ಬಂಧಿಸಿ, 28 ಕೆಜಿ ಗಾಂಜಾ, ನಗದು ಹಾಗೂ ಕಾರ್ ನ್ನು ಪಿ.ಡಿ.ಹಳ್ಳಿ ಠಾಣೆ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.
ಆಂಧ್ರದಿಂದ ಬಳ್ಳಾರಿ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಮೂಲಕ ಶಿವಮೊಗ್ಗಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿಯಿಂದ ಪರಮದೇವನಹಳ್ಳಿ ಠಾಣೆ ಪೊಲೀಸರು ಕಾರ್ ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ.
ಕಾರ್ ನಲ್ಲಿದ್ದ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅನ್ವರ್ ಕಾಲನಿಯ ಅಡಕೆ ವ್ಯಾಪಾರಿ ಆಶ್ಫಕ್ ಖಾನ್, ಹಣ್ಣಿನ ವ್ಯಾಪಾರಿ ತೌಷಿಬ್ ಖಾನ್ ಹಾಗೂ ಬಿ.ಕಾಂ 2ನೇ ವರ್ಷದ ವಿದ್ಯಾರ್ಥಿ ಸೈಯದ್ ಅಕ್ಸರ್ ಎನ್ನುವವರನ್ನು ಬಂಧಿಸಲಾಗಿದೆ. ಅಲ್ಲದೆ, ಕಾರ್ ನಲ್ಲಿದ್ದ 2.80 ಲಕ್ಷ ರೂ. ಮೌಲ್ಯದ ಗಾಂಜಾ, 2 ಲಕ್ಷ ರೂ. ಮೌಲ್ಯದ ಕಾರ್ ಹಾಗೂ ನಗದು 20 ಸಾವಿರ ರೂ. ಸೇರಿ ಒಟ್ಟು 5ಲಕ್ಷ ರೂ. ಮೌಲ್ಯದ ವಸ್ತಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪಿ.ಡಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ವರದಿ. ಎಂ. ಎಲ್. ವೆಂಕಟೇಶ್ ಬಳ್ಳಾರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030