ಎಐಡಿಎಸ್ಓ ವತಿಯಿಂದ ಪದವಿ, ಸ್ನಾತ್ತಕೋತ್ತರ 1,3, ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಬೇಕೆಂದು ಪ್ರತಿಭಟನೆ ನಡೆಸಿದರು. ಇಂದು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ವತಿಯಿಂದ ಪದವಿ ಸ್ನಾತಕೋತ್ತರ ಪದವಿ 1,3, ಮತ್ತು 5ನೇ ಪರೀಕ್ಷೆ ರದ್ದುಗೊಳಿಸಬೇಕೆಂದು ಆಗ್ರಹಿಸಿ ಬಳ್ಳಾರಿಯ ಸರಳಾದೇವಿ ಕಾಲೇಜಿನ ಎದುರು ಪ್ರತಿಭಟನೆ ಮಾಡಿ ಮಾನ್ಯ ಪ್ರಾಂಶುಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಹಾಗೂ ವಿ, ಎಸ್, ಕೆ, ವಿಶ್ವವಿದ್ಯಾನಿಲಯಕ್ಕೆ ಮನವಿಯನ್ನು ಪ್ರಾಂಶುಪಾಲರ ಮುಖಾಂತರ ಕೂಡ ಮನವಿ ಕಳುಹಿಸಲಾಯಿತು.
ಈ ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಒ ಜಿಲ್ಲಾಧ್ಯಕ್ಷರಾದ ಗುರಳ್ಳಿ ರಾಜ,ಅವರು 1 ತಿಂಗಳಿನ
ಲ್ಲಿ, 2 ಸೆಮಿಸ್ಟರ್ ಪರೀಕ್ಷೆ ಹೇರಬೇಡಿ,ಒಂದೇ ಪರೀಕ್ಷೆ ನಡೆಸಿ. ಕಳೆದ ಸುಮಾರು ಎರಡು ವಾರಗಳಿಂದ ರಾಜ್ಯದ ಪದವಿ ಸ್ನಾತಕೋತ್ತರ ಪದವಿ ಇಂಜಿನಿಯರಿಂಗ್ ಡಿಪ್ಲೊಮಾ ಹಾಗೂ ಫಾರ್ಮಸಿ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಸರ್ಕಾರಕ್ಕೆ ಹಿಂದಿನ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಿ,ಎಂದು ಆಗ್ರಹಿಸುತ್ತಿದ್ದಾರೆ.
ಹಲವು ರೀತಿಯಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸರ್ಕಾರಕ್ಕೆ ತಟ್ಟುವಂತೆ ಮಾಡಲು ಪ್ರಯತ್ನ ನಡೆದಿದೆ.
ಆನ್ಲೈನ್ ಚಳುವಳಿ ಪ್ರಾಂಶುಪಾಲರಿಗೆ ವಿವಿಯ ಕುಲಪತಿಗಳಿಗೆ ಮನವಿ ಪತ್ರ ಸಲ್ಲಿಕೆ.
ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಕೆ.
ಈ ಎಲ್ಲವೂ ಈಗಾಗಲೇ ನಡೆದಿದೆ,ಆದರೆ ಸರ್ಕಾರದಿಂದ ಯಾವುದೇ ಪ್ರತ್ಯುತ್ತರ ಇಲ್ಲದ ಕಾರಣ ವಿದ್ಯಾರ್ಥಿಗಳು ಈ ಹೋರಾಟವನ್ನು ಇನ್ನೂ ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗುವ ಅನಿವಾರ್ಯತೆ ಬಂದಿದೆ ಎಂದು ಹೇಳಿದರು.
AIDSO, ಜಿಲ್ಲಾ ಕಾರ್ಯದರ್ಶಿ ಮಾತನಾಡುತ್ತಾ ಈ ಹಿನ್ನೆಲೆಯಲ್ಲಿ, ರಾಜ್ಯಮಟ್ಟದ ವಿದ್ಯಾರ್ಥಿಗಳ ಹೋರಾಟ ಸಮಿತಿ ಮತ್ತು ಎಐಡಿಎಸ್ಒ ರಾಜ್ಯ ಸಮಿತಿ ಜಂಟಿಯಾಗಿ ಇಂದು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಆನ್ಲೈನ್ ತರಗತಿ ಬಹಿಷ್ಕಾರ ಕರೆ ನೀಡಿದೆ.
ಈ ಕರೆಯ ಮೇರೆಗೆ ಇಂದು ಬಳ್ಳಾರಿಯ ಬಹುತೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಆನ್ಲೈನ್ ತರಗತಿಗಳನ್ನು ಬಹಿಷ್ಕಾರ ಮಾಡಿದ್ದಾರೆ.
ಸರ್ಕಾರ ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ತಕ್ಷಣವೇ ಸ್ಪಂದಿಸಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ ಎಂದು ಹೇಳಿದರು.
** ಬೇಡಿಕೆಗಳು **
1. ಪದವಿ ಸ್ನಾತಕೋತ್ತರ ಪದವಿ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಫಾರ್ಮಸಿ ವಿದ್ಯಾರ್ಥಿಗಳಿಗೆ ಹಿಂದಿನ ಸೆಮಿಸ್ಟರ್, odd, ಸೆಮಿಸ್ಟರ್, ಪರೀಕ್ಷೆಗಳನ್ನು ನಡೆಸಬಾರದು.
2. ಎಲ್ಲಾ ವಿದ್ಯಾರ್ಥಿಗಳಿಗೂ 2 ಡೋಸ್ ಉಚಿತ ಲಸಿಕೆ ನೀಡುವವರೆಗೂ ಆಫ್ಲೈನ್ ತರಗತಿ ಮತ್ತು ಪರೀಕ್ಷೆಗಳನ್ನು ನಡೆಸಬಾರದು.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾಧ್ಯಕ್ಷರು ಗುರಳ್ಳಿ ರಾಜ.
ಜಿಲ್ಲಾ ಕಾರ್ಯದರ್ಶಿ ರವಿಕಿರಣ್ ಜೆಪಿ.
ಮತ್ತು ಜಿಲ್ಲಾ ಸೆಕ್ರೆಟರಿಯ ಟ್, ಸದಸ್ಯರಾದ ಕೆ,ಈ ರಣ್ಣ.
ಎಂ. ಶಾಂತಿ. ಅನುಪಮಾ.
ಮತ್ತು ಸದಸ್ಯರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ ಕೆ ಈರಣ್ಣ ಜಿಲ್ಲಾ ಸೆಕ್ರೆಟರಿಯಾಟ್, ಸದಸ್ಯರು ಎಐಡಿಎಸ್ಒ,ಬಳ್ಳಾರಿ.
ವರದಿಗಾರರು, ಎಂಎಲ್ ವೆಂಕಟೇಶ್ ಬಳ್ಳಾರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030