ಪದವಿ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಕಂಪ್ಲಿ ಶಾಸಕರಿಗೆ ಮನವಿ ಪತ್ರ ಎಐಡಿಎಸ್ಒ…!!!

Listen to this article

ಪದವಿ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಕಂಪ್ಲಿ ಶಾಸಕರಿಗೆ ಮನವಿ ಪತ್ರ ಎಐಡಿಎಸ್ಒ
ಕಳೆದ ಸುಮಾರು ಎರಡು ಮೂರು ವಾರಗಳಿಂದ ರಾಜ್ಯದ ಪದವಿ, ಸ್ನಾತಕೋತ್ತರ ಪದವಿ,
ಇಂಜಿನಿಯರಿಂಗ್ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಸರ್ಕಾರಕ್ಕೆ ಹಿಂದಿನ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಿ,ಎಂದು ವಿದ್ಯಾರ್ಥಿ ಸಂಘಟನೆ ವತಿಯಿಂದ ಕಂಪ್ಲಿ ಶಾಸಕರಾದ ಮಾನ್ಯಶ್ರೀ ಜೆ.ಎನ್. ಗಣೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಶಾಸಕರು ಮನವಿ ಸ್ವೀಕರಿಸಿ ಸಕಾರಾತ್ಮಕವಾಗಿ ಸ್ಪಂದಿಸಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸೆಕ್ರೆಟರಿಯಟ್ ಸದಸ್ಯರಾದ ಕೆ. ಈರಣ್ಣ, ಸಿದ್ದು, ಹಾಗೂ ವಿದ್ಯಾರ್ಥಿಗಳ ಹೋರಾಟ ಸಮಿತಿ ಸದಸ್ಯರು ಭಾಗವಹಿಸಿದ್ದರು.
ಬೇಡಿಕೆಗಳು
1. ಪದವಿ ಸ್ನಾತಕೋತ್ತರ ಪದವಿ ಎಂಜಿನಿಯರಿಂಗ್ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಹಿಂದಿನ ಸೆಮಿಸ್ಟರ್ (ಬೆಸ ಸೆಮಿಸ್ಟರ್) ಪರೀಕ್ಷೆಗಳನ್ನು ನಡೆಸಬಾರದು.
2. ಎಲ್ಲಾ ವಿದ್ಯಾರ್ಥಿಗಳಿಗೂ 2 ಡೇಸ್ ಉಚಿತ ಕರೋನ ಲಸಿಕೆ ನೀಡುವವರೆಗೂ ಆಫ್ಲೈನ್ ತರಗತಿ ಮತ್ತು ಪರೀಕ್ಷೆಗಳನ್ನು ನಡೆಸಬಾರದು.
ಸುದ್ದಿ ಇವರಿಂದ.
ಈರಣ್ಣ ಜಿಲ್ಲಾ ಸೆಕ್ರೆಟರಿಯಟ್ ಸದಸ್ಯರು
AIDSO. ಬಳ್ಳಾರಿ.


ವರದಿಗಾರರು ಎಂ.ಎಲ್. ವೆಂಕಟೇಶ್ ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend