ಕಾನಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ 32 ನೇ ರಾಷ್ಟ್ರೀಯ ರಸ್ತೆ ಸುರಕ್ಷಿತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು!!!

Listen to this article

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

*ದಿನಾಂಕ.19.1.2021. ಬಳ್ಳಾರಿ ಜಿಲ್ಲಾ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ..*
ತಾಲೂಕಿನ ಕಾನಹೊಸಹಳ್ಳಿ ಗ್ರಾಮದಲ್ಲಿ32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಮಾಸಿಕ ಕಾರ್ಯಕ್ರಮವನ್ನು ಕಾನಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರ ಸಮ್ಮುಖದಲ್ಲಿ,ಮಾನ್ಯ ಶ್ರೀಯುತ ಪಿ ಸ್ ಐ ನಾಗರಾಜ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸುರಕ್ಷತಾ ರಸ್ತಾ ಸಪ್ತಾಹ ಕಾರ್ಯಕ್ರಮವನ್ನು ಉದ್ದೇಶಿಸಿ ಕಾನಹೊಸಹಳ್ಳಿ ಪೊಲೀಸ್ ಠಾಣೆಯ ಮಾನ್ಯ ಶ್ರೀಯುತ ಪಿಎಸ್ಐ ನಾಗರಾಜ್ ರವರು ದ್ವಿಚಕ್ರ ವಾಹನ ಸವಾರರನ್ನು ಉದ್ದೇಶಿಸಿ ಮಾತನಾಡಿ ಪ್ರತಿಯೊಬ್ಬರೂ, ಕಡ್ಡಾಯವಾಗಿ ಹೆಲ್ಮೆಟ್ ಧರಿಸ ಬೇಕು ದ್ವಿಚಕ್ರ ವಾಹನ ನಡೆಸುವವರು ಕಡ್ಡಾಯವಾಗಿ ವಾಹನ ಪರವಾನಿಗೆ ಪಡೆದಿರಬೇಕು.

ಮದ್ಯಪಾನವನ್ನು ಮಾಡಿ ವಾಹನವನ್ನು ಚಾಲನೆ ಮಾಡ ಬಾರದು. ಕಾನೂನು ನಿಯಮ ಉಲ್ಲಂಘನೆ ಮಾಡಿದರೆ ಪ್ರತಿಯೊಬ್ಬ ವಾಹನ ಸವಾರರಿಗೆ ದಂಡ ವಿಧಿಸಲಾಗುವುದು. ಇನ್ನೂ ಅನೇಕ ವಿಚಾರಗಳನ್ನು ಸಾರ್ವಜನಿಕರಿಗೆ ಮುಂದೆ ಮಾತನಾಡಿ ಇತ್ತೀಚೆಗೆ ಕೊರೋನಾದ ಹರಡುವಿಕೆ ಬಗ್ಗೆ ಯಾರಿಗೂ ಭಯವಿಲ್ಲ ದಂತಾಗಿದೆ ಪ್ರತಿಯೊಬ್ಬರು ಮಾಸ್ಕ್ ಧರಿಸಲೇಬೇಕು ಮಾಸ್ಕ ಧರಿಸುವುದನ್ನು ಮರೆತುಬಿಟ್ಟಿದ್ದೀರಾ ದಯಮಾಡಿ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕೆಂದು ಮಾತನಾಡಿ ರಸ್ತೆ ಸುರಕ್ಷಾ ಸಪ್ತಾಹದ ಬಗ್ಗೆ ಜಾಗ್ರುತಿ ಮೂಡಿಸಿದರು. ಈ ಸಂದರ್ಭದಲ್ಲಿ ಕಾನಹೊಸಹಳ್ಳಿ ಸುತ್ತಮುತ್ತಲಿನ ಜನರು ಸಾರ್ವಜನಿಕರು ಕಾನಹೊಸಹಳ್ಳಿ ಗ್ರಾಮಸ್ಥರು ಕಾನಹೊಸಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು….

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend