ಬೆಂಗಳೂರಿನ ಇಂದಿರಾನಗರದ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ಈ ಸ್ಪೋಟ ಸಂಭವಿಸಿದೆ. ನಿಗೂಢ ಸ್ಪೋಟದ ವೇಳೆ ಭಾರಿ ಶಬ್ದ ಕೇಳಿಬಂದಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಹೋಟೆಲ್ ನ ಚೇರ್ ನಲ್ಲಿ ಇಟ್ಟಿದ್ದ ಒಂದು ಬ್ಯಾಗ್ನಲ್ಲಿದ್ದ ಸ್ಫೋಟಕ ಏಕಾಏಕಿ ಸ್ಫೋಟಗೊಂಡಿದ್ದು,
ಬೆಂಕಿಯಿಂದಾಗಿ ಹೋಟೆಲ್ ಕೆಲವು ಭಾಗಗಳಲ್ಲಿ ಬೆಂಕಿಯಿಂದ ಹಾನಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿ ಶಾಮಕ ದಳದ ವಾಹನಗಳು ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ, ಮತ್ತು ಈ ಒಂದು ಘಟನ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಧಾವಿಸಿ ಘಟನೆಯ ವಿವರಣೆಯನ್ನು ಕಲೆಹಾಕುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ…
ವರದಿ. ಮುಕ್ಕಣ್ಣ ಹುಲಿಗುಡ್ಡ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030