ಕೊರೋನಾ ವಿರುದ್ಧದ ಹೋರಾಟಕ್ಕೆ 100 ಕೋಟಿ ರೂ. ದೇಣಿಗೆ ಘೋಷಿಸಿದ ಇನ್ಫೋಸಿಸ್ ಸುಧಾಮೂರ್ತಿ
ಮೇ 10 – ದಿನೇದಿನೆ ಹೆಚ್ಚುತ್ತಿರುವ ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ 100 ಕೋಟಿ ರೂ. ದೇಣಿಗೆ ನೀಡುವುದಾಗಿ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಘೋಷಿಸಿದ್ದಾರೆ. ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಕಳೆದ ವರ್ಷವೂ ಫೌಂಡೇಷನ್ 100 ಕೋಟಿ ರು. ದೇಣಿಗೆ ನೀಡಿತ್ತು. ಇದೀಗ ಹೆಚ್ಚುವರಿ 100 ಕೋಟಿ ರೂ. ಪ್ರಕಟಿಸುವ ಮೂಲಕ ಸೋಂಕಿನ ವಿರುದ್ಧ ಹೋರಾಟಕ್ಕಾಗಿ 200 ಕೋಟಿ ರೂ ನೀಡಿದಂತಾಗಿದೆ. ಕೋವಿಡ್ ರೋಗಿಗಳಿಗೆ ಆಮ್ಲಜನಕ, ವೆಂಟಿಲೇಟರ್ ಮತ್ತು ಇತರ ಔಷಧಿಗಳನ್ನು ಖರೀದಿಗೆ ಬಳಸಿಕೊಳ್ಳಬಹುದಾಗಿದ್ದು, ಮಂಗಳೂರು, ಹೈದರಾಬಾದ್, ಪುಣೆ, ನಾಗ್ಪುರ, ನವದೆಹಲಿ ಮತ್ತು ತಿರುವನಂತಪುರಂಗೆ ಇನ್ಫೋಸಿಸ್ ಫೌಂಡೇಶನ್ ಹಣ ಒದಗಿಸಲಿದೆ ಎಂದು ಸುಧಾಮೂರ್ತಿ ಘೋಷಿಸಿದ್ದಾರೆ.
ವರದಿ. ನಳಿನಿ ಬೆಂಗಳೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030