ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಚಿವ ಆನಂದ್ ಸಿಂಗ್ ರನ್ನು ಭೇಟಿ ಮಾಡಿ ಭಾರೀ ಕುತೂಹಲ ಮೂಡಿಸಿ ದ್ದಾರೆ. ಇನ್ನೂ ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಬಿಜೆಪಿಯ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾ ರೆ ಅಂತ ಹೇಳಿದ್ದರು.
ಈ ಹೇಳಿಕೆ ಬೆನ್ನಲ್ಲೇ ಡಿಕೆಶಿ ಅವರು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಮೂಡಿಸಿದೆ. ಡಿ.ಕೆ ಶಿವಕುಮಾರ್ ಸಚಿವ ಆನಂದ್ ಸಿಂಗ್ ಮನೆಯಲ್ಲಿ ಭೇಟಿಯಾಗಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಈ ನಡುವೆ ಭೇಟಿಯಾದ ಬಳಿ ಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಆನಂದ್ ಸಿಂಗ್, ಇದೊಂದು ಸೌಜ್ಯನವಾದ ಭೇಟಿ. ಸುಖಾ ಸುಮ್ಮನೆ ಸುಳ್ಳು ಹಬ್ಬಿಸುವುದು ಬೇಡ ಎಂದು ಸಚಿವ ಆನಂದ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.ನೋಡೋಣ ಇನ್ನೂ ಮುಂದಿನ ರಾಜಕೀಯದ ನಡೆಯಲ್ಲಿ ಎಲ್ಲವನ್ನು…
ವರದಿ. ಮಂಜುನಾಥ್, ಎನ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030