ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ಹಿಡಕಲ್ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಇಂದು ಮನರೇಗಾ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ಹಮ್ಮಿಕೊಳ್ಳಲಾಯಿತು.
ಶ್ರೀ. ಅರುಣ್ ಮಾಚಕನೂರ ಸಹಾಯಕ ನಿರ್ದೇಶಕರು ತಾಲ್ಲೂಕ ಪಂಚಾಯತ ರಾಯಬಾಗ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಹಿಡಕಲ್ ಗ್ರಾಮದ ವೈದ್ಯಾಧಿಕಾರಿಗಳು,
ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ ಸಿಬ್ಬಂದಿಗಳು, ತಾಲ್ಲೂಕು ಪಂಚಾಯತ ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು,ಆಸ್ಪತ್ರೆಯ ವೈದ್ಯರು, ಬಿಎಫ್ ಟಿ, ಮತ್ತು ಕಾಯಕ ಮಿತ್ರರೂ ಗ್ರಾಮ ಪಂಚಾಯತ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮನರೇಗಾ ಯೋಜನೆಯ ಕೂಲಿಕಾರರು ಹಾಗೂ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಆರೋಗ್ಯ ತಪಾಸಣೆ:
ಆರೋಗ್ಯ ಶಿಬಿರದಲ್ಲಿ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ವೈದ್ಯರು ಬಿಪಿ, ಶುಗರ್, ರಕ್ತಹೀನತೆ, ಕಣ್ಣಿನ ತಪಾಸಣೆ ಸೇರಿದಂತೆ ಇನ್ನಿತರ ರೋಗಗಳ ತಪಾಸಣೆ ಮಾಡಿದರು. ಶಿಬಿರದಲ್ಲಿ ಸಾರ್ವಜನಿಕರಿಗೆ ಕೋವಿಡ್ ಬೂಸ್ಟರ್ ಡೋಸ್ ಇಂಜೆಕ್ಷನ್ ಕೂಡ ನೀಡಲಾಯಿತು. ಮಾತ್ರೆ ಹಾಗೂ ಔಷಧಿಗಳನ್ನು ವಿತರಿಸಲಾಯಿತು ಸರ್.
ಐ.ಇ.ಸಿ ಸಂಯೋಜಕರು
ತಾಲ್ಲೂಕು ಪಂಚಾಯತ ರಾಯಬಾಗ..
ವರದಿ. ಮಹಾಲಿಂಗ ಗಗ್ಗರಿ ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030