ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು ಹಂದಿಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಅಡಿಯಲ್ಲಿ ನಿರ್ಮಾಣವಾದ ಶೌಚಾಲಯ ನಿರ್ಮಾಣದಲ್ಲಿ ಬಾರಿ ಗೋಲ್ಮಾಲ್ 2017-18 ರಲ್ಲಿ ಗ್ರಾಮ ಪಂಚಾಯತನಲ್ಲಿ ಮಂಜೂರಾದ ಶೌಚಾಲಯ ಬಾರಿ ಅಕ್ರಮವಾಗಿರುವುದು ತನಿಖೆ ವೇಳೆಯಲ್ಲಿ ಕಂಡುಬಂದಿದೆ. 21 ಶೌಚಾಲಯಗಳು ಅಪೂರ್ಣವಾಗಿದೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರತಿಯೊಂದು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬಯಲು ಶೌಚಾಲಯ ಮುಕ್ತ ಗ್ರಾಮ ಮಾಡುವ ಕನಸಾಗಿತ್ತು ಆದರೆ ಗ್ರಾಮ ಪಂಚಾಯತ್ ಅಧಿಕಾರಿಗಳು ಈ ಯೋಜನೆಯಲ್ಲಿ ಶೌಚಾಲಯಗಳನ್ನು ಪೂರ್ಣಗೊಳಿಸದೆ ಬಳಕೆಗೆ ಭಾರದ ರೀತಿಯಲ್ಲಿ ನಿರ್ಮಿಸಿದ್ದು. ಜೈ ಹೋ ಜನತಾ ವೇದಿಕೆಯಿಂದ ನೀಡಿದ ದೂರಿನ್ವಯ ರಾಯಬಾಗ ತಾಲ್ಲೂಕು ಪಂಚಾಯತ ಅಧಿಕಾರಿಗಳ ನಿರ್ದೇಶನದ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ತನಿಖೆ ನಡೆಸಿದ್ದು, ವರದಿ ಸಲ್ಲಿಸಿದ ನಂತರ ಮೇಲಾಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಯಾವ ರೀತಿ ಕ್ರಮ ಕೈಗೋಳ್ಳುತ್ತಾರೆ ಎಂದು ಕಾದು ನೋಡಬೇಕಾಗಿದೆ..
ವರದಿ. ಮಹಾಲಿಂಗ ಗಗ್ಗರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030