ನೀತಿಸಂಹಿತೆ ಉಲ್ಲಂಘನೆ, ಸುಳ್ಳು ಸುದ್ದಿಗಳ ಮೇಲೆ ನಿಗಾ‌ ವಹಿಸಲು ಸೂಚನೆ…!!!

Listen to this article

ಮೀಡಿಯಾ ಮಾನಿಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ‌ ನಿತೇಶ್ ಪಾಟೀಲ ಭೇಟಿ
ನೀತಿಸಂಹಿತೆ ಉಲ್ಲಂಘನೆ, ಸುಳ್ಳು ಸುದ್ದಿಗಳ ಮೇಲೆ ನಿಗಾ‌ ವಹಿಸಲು ಸೂಚನೆ

ಬೆಳಗಾವಿ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆ, ಸುಳ್ಳುಸುದ್ದಿ ಹರಡುವಿಕೆ ಹಾಗೂ ಚುನಾವಣಾ ಜಾಹೀರಾತುಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯ “ವಾರ್ತಾಭವನ”ದಲ್ಲಿ ಸ್ಥಾಪಿಸಲಾಗಿರುವ ಮೀಡಿಯಾ ಮಾನಿಟರಿಂಗ್ ಕೇಂದ್ರಕ್ಕೆ ಶುಕ್ರವಾರ(ಏ.5) ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಪೂರಕವಾಗಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮಾಧ್ಯಮ‌ ಕಣ್ಗಾವಲು ಘಟಕ(ಮೀಡಿಯಾ ಮಾನಿಟರಿಂಗ್ ಕೇಂದ್ರ) ಸ್ಥಾಪಿಸಲಾಗಿದೆ.

ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಪ್ರಸಾರವಾಗುವ ಚುನಾವಣಾ ಸುದ್ದಿ‌ ಹಾಗೂ‌ ಜಾಹೀರಾತುಗಳನ್ನು ಪ್ರತಿದಿನ ಪರಿಶೀಲನೆ ಮಾಡುವುದರ ಜತೆಗೆ ನೀತಿಸಂಹಿತೆ ಹಾಗೂ ನಿಯಮಾವಳಿ ಉಲ್ಲಂಘನೆ‌ ಕಂಡುಬಂದರೆ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ‌ ಹಾಗೂ ಮಾದರಿ‌ ನೀತಿಸಂಹಿತೆ ನೋಡಲ್ ಅಧಿಕಾರಿಗಳಿಗೆ ತಕ್ಚಣವೇ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಮೀಡಿ‌ಯಾ ಮಾನಿಟರಿಂಗ್ ಕೇಂದ್ರದ‌ ಕಾರ್ಯಚಟುವಟಿಕೆಗಳ ಕುರಿತು ಎಂಸಿಎಂಸಿ ನೋಡಲ್ ಅಧಿಕಾರಿ ಗುರುನಾಥ ಕಡಬೂರ ಮಾಹಿತಿಯನ್ನು ನೀಡಿದರು.

ಮೀಡಿಯಾ ಮಾನಿಟರಿಂಗ್ ಕೇಂದ್ರದ ಅಧಿಕಾರಿಗಳಾದ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕಿ ಶ್ರೀದೇವಿ ನಾಗನೂರ, ಮುಖ್ಯೋಪಾಧ್ಯಾಯ ಲಕ್ಷ್ಮಣ ತಳವಾರ, ತಾಂತ್ರಿಕ ಸಹಾಯಕರಾದ ಮಹಾಂತೇಶ ಪತ್ತಾರ, ಸಹ ಶಿಕ್ಷಕರಾದ ಹೊಳೆಪ್ಪ ನಾಯಕ, ಸುನೀಲ ಪಾಟೀಲ ಸೇರಿದಂತೆ ವಾರ್ತಾ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು….

ವರದಿ. ಮಹಾಲಿಂಗ ಗಗ್ಗರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend